ಡಿವಿಜಿಸುದ್ದಿ.ಕಾಂ, ದಾವಣಗೆರೆ: ಕೇಂದ್ರ ಸರ್ಕಾರಿ ಕಚೇರಿಯಲ್ಲಿ ಹಿಂದಿ ಸಪ್ತಾಹ ದಿನಾಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಬಿಎಸ್ಎನ್ಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕರವೇ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರÀ ತನ್ನ ಅಧೀನ ಇಲಾಖೆಯಲ್ಲಿ ಹಿಂದಿ ಬಳಸುವಂತೆ ಒತ್ತಡ ಹಾಕುತಿದೆ. ಇದರಿಂದ ಪ್ರಾದೇಶಿಕ ಭಾಷೆ ಅವನತಿಗೆ ಕಾರಣವಾಗುತ್ತಿದೆ. ಕೇಂದ್ರ ಸರ್ಕಾರ ಹಿಂದೆ ಭಾಷೆ ಹೇರಿಕೆಯನ್ನು ನಿಲ್ಲಿಸಬೇಕೆಂದು ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬ್ಯಾಂಕ್, ಪೋಸ್ಟ್ ಆಫೀಸ್, ಬಿಎಸ್ಎನ್ಎಲ್ ಕಚೇರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸಿಬಿಎಸ್ಸಿ ಶಾಲಾ- ಕಾಲೇಜ್ ಗಳಲ್ಲಿ ಹಿಂದಿ ಸಪ್ತಾಹ ಆಚರಿಸಲಾಗುತ್ತಿದೆ. ಇದು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆ ಬೆಳವಣಿಗೆ ಮಾರಕವಾಗಲಿದೆ. ಇದರ ವಿರುದ್ಧ ಎಲ್ಲ ಕನ್ನಡಿಗರು ದ್ವನಿ ಎತ್ತ ಬೇಕಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಘಟಕ ಅಧ್ಯಕ್ಷ ಹನುಮಂತಪ,್ಪ ಲೋಕೇಶ್ ಮಹಿಳಾ ಘಟಕದ ಅಧ್ಯಕ್ಷ ಬಸಮ್ಮ ಮಂಜುಳಮ್ಮ, ರೇಖಮ್ಮ ನೇತ್ರಮ್ಮ, ಮಂಜುಳಮ್ಮ, ಸಕ್ಕುಬಾಯಿ, ಸುರೇಶ್, ಕರಿಬಸವ, ಗಣೇಶ್, ಗಜೇಂದ್ರ, ಸಂತೋಷ್, ವೀರೇಶ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.



