ದಾವಣಗೆರೆ: ಇಲ್ಲಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಗೀತ ಶಿಕ್ಷಕಿ ಶೋಭಾ ರಂಗನಾಥ್ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮುದ್ದೇಬಿಹಾಳದ ವಿ.ಬಿ.ಸಿ ಮೈದಾನದಲ್ಲಿ ಜ.29 ರಂದು ನಡೆಯಲಿರುವ ಸ್ವಾಮಿ ವಿವೇಕಾನಂದ ಜಯಂತಿ ರಾಜ್ಯ ಯುವ ಸಮ್ಮೇಳನದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ .ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಎಸ್.ಬಾಲಾಜಿ, ವಿಜಯಪುರ ಜಿಲ್ಲಾಧ್ಯಕ್ಷ ಪುಂಡಲೀಕ ಮುರಳಿ ಅವರನ್ನೊಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.ಎಂದು ಒಕ್ಕೂಟದ ದಾವಣಗೆರೆ ಜಿಲ್ಲಾಧ್ಯಕ್ಷ ಎನ್.ಕೆ. ಕೊಟ್ರೇಶ್ ತಿಳಿಸಿದ್ದಾರೆ.



