Connect with us

Dvgsuddi Kannada | online news portal | Kannada news online

ಹರಿಹರದಲ್ಲಿ ಫೆ. 21 ರಿಂದ ಮೆಕ್ಕೆಜೋಳ ಇ-ಟೆಂಡರ್ ಮಾರಾಟ ಆರಂಭ

maize 22

ಪ್ರಮುಖ ಸುದ್ದಿ

ಹರಿಹರದಲ್ಲಿ ಫೆ. 21 ರಿಂದ ಮೆಕ್ಕೆಜೋಳ ಇ-ಟೆಂಡರ್ ಮಾರಾಟ ಆರಂಭ

ದಾವಣಗೆರೆ: ಮೆಕ್ಕೆಜೋಳ ಬೆಳೆಗಾರರ ಅನುಕೂಲಕ್ಕಾಗಿ ಹರಿಹರದ ಎಪಿಎಂಸಿ ಮುಖ್ಯ ಪ್ರಾಂಗಣದಲ್ಲಿ ಫೆ. 21 ರಿಂದ ಪ್ರತಿ ಸೋಮವಾರ ಮತ್ತು ಗುರುವಾರದಂದು ಮೆಕ್ಕೆಜೋಳವನು ಇ-ಟೆಂಡರ್ ಮೂಲಕ ಮಾರಾಟ ಆರಂಭವಾಗಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ ಮಕ್ಕೆಜೋಳ ಉತ್ಪನ್ನವನ್ನು ಸ್ಥಳೀಯವಾಗಿ ಮಾರಾಟ ಮಾಡುತ್ತಿರುವುದರಿಂದ ರೈತರಿಗೆ ಕೇಂದ್ರ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‍ಗೆ ರೂ.1870/- ಗಳಿಗಿಂತ ಕಡಿಮೆ ಧಾರಣೆ ಆಗುತ್ತಿರುವುದು ಕಂಡುಬಂದಿದೆ. ರೈತರಿಗೆ ಸ್ಪರ್ಧಾತ್ಮಕ ಬೆಲೆ ದೊರಕಿಸಿಕೊಡಲು ಕಳೆದ ತಿಂಗಳು ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜರುಗಿದ ವಿಡಿಯೋ ಸಂವಾದದಲ್ಲಿ ತಿಳಿಸಿದ್ದು, ಮೆಕ್ಕೆಜೋಳ ಬೆಳೆಯುವ ಪ್ರದೇಶಗಳಲ್ಲಿಯ ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಮೆಕ್ಕೆಜೋಳ ಉತ್ಪನ್ನಕ್ಕೆ ಇ-ಟೆಂಡರ್ ಮಾರಾಟ ಪದ್ದತಿಯನ್ನು ಅಳವಡಿಸಿಕೊಂಡು ಮಾರಾಟ ಮಾಡಲು ನಿರ್ದೇಶನ ನೀಡಿರುತ್ತಾರೆ. ಸಮಿತಿಯ ವ್ಯಾಪ್ತಿಯಲ್ಲಿ ಬೆಳೆಯುವ ಕೃಷಿ ಹುಟ್ಟುವಳಿಯಾದ ಮೆಕ್ಕೆಜೋಳವನ್ನು ಫೆ.21 ರಿಂದ ಪ್ರತಿ ಸೋಮವಾರ ಹಾಗೂ ಗುರುವಾರದಂದು ಸಮಿತಿಯ ಮುಖ್ಯ ಪ್ರಾಂಗಣದಲ್ಲಿ ಇ-ಟೆಂಡರ್ ಮಾರಾಟ ಪದ್ದತಿ ಮೂಲಕ ವ್ಯಾಪಾರ ವಹಿವಾಟು ಮಾಡಲು ಆರಂಭಿಸಲಾಗುವುದು.

ರೈತಬಾಂಧವರು ತಾವು ಬೆಳೆದ ಮೆಕ್ಕೆಜೋಳ ಉತ್ಪನ್ನವನ್ನು ಮಾರುಕಟ್ಟೆಗೆ ತಂದು ಇ-ಟೆಂಡರ್‍ನಲ್ಲಿ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆ ಪಡೆದುಕೊಳ್ಳಬೇಕೆಂದು ಎಪಿಎಂಸಿ ಆಡಳಿತಾಧಿಕಾರಿ ಕೆ.ಬಿ ರಾಮಚಂದ್ರಪ್ಪ ಹಾಗೂ ಕಾರ್ಯದರ್ಶಿ ವಿದ್ಯಾಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top