Connect with us

Dvgsuddi Kannada | online news portal | Kannada news online

ದಾವಣಗೆರೆ: ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

IMG 20240205 190916

ದಾವಣಗೆರೆ

ದಾವಣಗೆರೆ: ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

ದಾವಣಗೆರೆ: ದಾವಣಗೆರೆ ತಾಲ್ಲೂಕು ಆನಗೋಡು ಗ್ರಾಮದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಫಲಾನುಭವಿ ರೈತ ವಿಶ್ವವಿಜೇತ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಮಾಯಕೊಂಡ ಶಾಸಕರಾದ ಕೆ.ಎಸ್ ಬಸವಂತಪ್ಪ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

ಸರ್ಕಾರವು ಮಳೆಬರದ ವೇಳೆ ನೀರನ್ನು ಸಂಗ್ರಹಿಸಿ ಬೆಳೆ ಸಂರಕ್ಷಣೆ ಮಾಡಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ, ಬದು ನಿರ್ಮಾಣ, ಕೃಷಿ ಹೊಂಡಗಳಿಗೆ ಪಾಲಿಥಿನ್ ಹೊದಿಕೆ ಮತ್ತು ತಂತಿ ಬೇಲಿ, ತುಂತುರು ನೀರಾವರಿ ಘಟಕ ಹಾಗೂ ಡೀಸೆಲ್ ಪಂಪ್‍ಸೆಟ್ ಗಳನ್ನು ಸಹಾಯಧನದಡಿಯಲ್ಲಿ ಅಳವಡಿಸಿಕೊಳ್ಳಲು ಅವಕಾಶವಿದೆ. ಎಲ್ಲಾ ರೈತರು ಕೃಷಿ ಭಾಗ್ಯ ಯೋಜನೆ ಪಡೆದು ಲಾಭದಾಯಕ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಅವರು ರೈತರಿಗೆ ತಿಳಿಸಿದರು.

ಕೃಷಿ ಸಹಾಯಕ ನಿರ್ದೇಶಕರಾದ ಶ್ರೀಧರಮೂರ್ತಿ ಡಿ.ಎಂ. ಇವರು ಮಾತಾನಾಡಿ ಕೃಷಿ ಭಾಗ್ಯ ಯೋಜನೆಯಡಿ ಮಾರ್ಗಾಸೂಷಿನ್ವಯ 6 ಘಟಕಗಳನ್ನು ರೈತರು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಅವಾಗ ಮಾತ್ರ ಈ ಯೋಜನೆ ಪಡೆಯಬಹುದಾಗಿದೆ ಎಂದರು.

ಕೃಷಿ ಅಧಿಕಾರಿಗಳಾದ ಶ್ರೀನಿವಾಸ ಆರ್, ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಚಂದ್ರಮ್ಮ, ಪಂಚಾಯಿತಿ ಸದಸ್ಯರಾದ ಬಸವರಾಜಪ್ಪ, ಮತ್ತು ಎಸ್.ಬಿ. ಯೋಗೇಶಪ್ಪ, ಹುಣಿಹಳ್ಳಿ ಚಂದ್ರಪ್ಪ, ಆರ್.ವಿ. ತೇಜವರ್ಧನ್, ಕರಿಬಸಪ್ಪ, ಕಲ್ಲೇಶ್, ಸುರೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top