ದಾವಣಗೆರೆ: ದಾವಣಗೆರೆ ತಾಲ್ಲೂಕು ಆನಗೋಡು ಗ್ರಾಮದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಫಲಾನುಭವಿ ರೈತ ವಿಶ್ವವಿಜೇತ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಮಾಯಕೊಂಡ ಶಾಸಕರಾದ ಕೆ.ಎಸ್ ಬಸವಂತಪ್ಪ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಸರ್ಕಾರವು ಮಳೆಬರದ ವೇಳೆ ನೀರನ್ನು ಸಂಗ್ರಹಿಸಿ ಬೆಳೆ ಸಂರಕ್ಷಣೆ ಮಾಡಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ, ಬದು ನಿರ್ಮಾಣ, ಕೃಷಿ ಹೊಂಡಗಳಿಗೆ ಪಾಲಿಥಿನ್ ಹೊದಿಕೆ ಮತ್ತು ತಂತಿ ಬೇಲಿ, ತುಂತುರು ನೀರಾವರಿ ಘಟಕ ಹಾಗೂ ಡೀಸೆಲ್ ಪಂಪ್ಸೆಟ್ ಗಳನ್ನು ಸಹಾಯಧನದಡಿಯಲ್ಲಿ ಅಳವಡಿಸಿಕೊಳ್ಳಲು ಅವಕಾಶವಿದೆ. ಎಲ್ಲಾ ರೈತರು ಕೃಷಿ ಭಾಗ್ಯ ಯೋಜನೆ ಪಡೆದು ಲಾಭದಾಯಕ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಅವರು ರೈತರಿಗೆ ತಿಳಿಸಿದರು.
ಕೃಷಿ ಸಹಾಯಕ ನಿರ್ದೇಶಕರಾದ ಶ್ರೀಧರಮೂರ್ತಿ ಡಿ.ಎಂ. ಇವರು ಮಾತಾನಾಡಿ ಕೃಷಿ ಭಾಗ್ಯ ಯೋಜನೆಯಡಿ ಮಾರ್ಗಾಸೂಷಿನ್ವಯ 6 ಘಟಕಗಳನ್ನು ರೈತರು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಅವಾಗ ಮಾತ್ರ ಈ ಯೋಜನೆ ಪಡೆಯಬಹುದಾಗಿದೆ ಎಂದರು.
ಕೃಷಿ ಅಧಿಕಾರಿಗಳಾದ ಶ್ರೀನಿವಾಸ ಆರ್, ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಚಂದ್ರಮ್ಮ, ಪಂಚಾಯಿತಿ ಸದಸ್ಯರಾದ ಬಸವರಾಜಪ್ಪ, ಮತ್ತು ಎಸ್.ಬಿ. ಯೋಗೇಶಪ್ಪ, ಹುಣಿಹಳ್ಳಿ ಚಂದ್ರಪ್ಪ, ಆರ್.ವಿ. ತೇಜವರ್ಧನ್, ಕರಿಬಸಪ್ಪ, ಕಲ್ಲೇಶ್, ಸುರೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



