Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ವಿದ್ಯುತ್ ಮಹೋತ್ಸವ ಕಾರ್ಯಕ್ರಮ

ದಾವಣಗೆರೆ

ದಾವಣಗೆರೆ: ನಾಳೆ ವಿದ್ಯುತ್ ಮಹೋತ್ಸವ ಕಾರ್ಯಕ್ರಮ

ದಾವಣಗೆರೆ:  ಉಜ್ವಲ ಭಾರತ ಉಜ್ವಲ ಭವಿಷ್ಯ ವಿದ್ಯುತ್ @ 2047 ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಜು.27 ರಂದು ಬೆಳಿಗ್ಗೆ 11 ಗಂಟೆಗೆ ತುಂಗಭದ್ರಾ ಸಭಾಂಗಣ, ಜಿಲ್ಲಾಧಿಕಾರಿಗಳ ಭವನ ದಾವಣಗೆರೆ ಇಲ್ಲಿ ಏರ್ಪಡಿಸಲಾಗಿದೆ.ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭೆಯ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಉಪಸ್ಥಿತಿರಾಗಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಕ್ಷೇತ್ರದ ಶಾಸಕ ಹಾಗೂ ಕನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಮಾಯಕೊಂಡ ಕ್ಷೇತ್ರದ ಶಾಸಕ ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ , ಹಾಗೂ ಕರ್ನಾಟಕ ವಿಧಾನ ಪರಿಷತ್‍ನ ಸರ್ಕಾರಿ ಮುಖ್ಯ ಸಚೇತಕರಾದ, ವೈ.ಎ.ನಾರಾಯಣಸ್ವಾಮಿ ಪಾಲ್ಗೊಳ್ಳುವರು.

ಮುಖ್ಯ ಅತಿಥಿಗಳಾಗಿ ದಾವಣಗೆರೆ ದಕ್ಷಿಣ ವಿಧಾನ ಸಭೆ ಕ್ಷೇತ್ರದ ಶಾಸಕ  ಶಾಮನೂರು ಶಿವಶಂಕರಪ್ಪ, ಹರಿಹರ ಕ್ಷೇತ್ರದ ಶಾಸಕ ಎಸ್.ರಾಮಪ್ಪ, ಹಾಗೂ ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿವಿಶ್ವಕರ್ಮ, ರವಿಕುಮಾರ್.ಎನ್, ಡಾ.ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಆರ್.ಶಂಕರ್, , ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಮಹಾನಗರಪಾಲಿಕೆ ಮಹಾಪೌರರಾದ ಆರ್.ಜಯಮ್ಮ, ದಾ-ಹ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ ಸುರೇಶ್ ಭಾಗವಹಿಸುವರು.

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚೆನ್ನಪ್ಪ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಚಿತ್ರದುರ್ಗವಲಯದ ಬೆಸ್ಕಾಂ ಮುಖ್ಯ ಅಭಿಯಂತರರಾದ ಕೆ.ವಿ ಗೋವಿಂದಪ್ಪ, ದಾವಣಗೆರೆ ವೃತ್ತ ಬೆಸ್ಕಾಂ ಅಧೀಕ್ಷಕ ಅಭಿಯಂತರರಾದ ಬಿ.ಎಸ್ ಜಗದೀಶ್, ಕಾರ್ಯಪಾಲಕ ಅಭಿಯಂತರರಾದ ಎಂ.ಹೆಚ್ ವಿಜಯಲಕ್ಷ್ಮೀ, ಹರಿಹರ ಬೆಸ್ಕಾಂನ ಕಾರ್ಯಪಾಲಕ ಅಭಿಯಂತರರಾದ ವಿನಯ್ ಕುಮಾರ್, ಹಿರಿಯೂರಿನ ಪವರ್ ಗ್ರೀಡ್ ಕಾಪೋರೇಷನ್ ಆಫ್ ಇಂಡಿಯಾ ಲಿ ಪ್ರಧಾನ ವ್ಯವಸ್ಥಾಪಕರಾದ ಹರೀಶ್ ಕುಮಾರ್ ನಾಯರ್, ಸಹಾಯಕ ವ್ಯವಸ್ಥಾಪಕರಾದ ಮೋಹನ್ ರಾಮ್ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top