ದಾವಣಗೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಿ ನೌಕರರ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನಾದ ವೇತನ ನೀಡಬೇಕು ಹಾಗೂ ಭತ್ಯೆ, ಖಾಲಿ ಇರುವ 2.65 ಲಕ್ಷ ಹುದ್ದೆಗಳ ಭರ್ತಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ವಿವಿಧ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಜಾರಿಗೊಳಿಸುವುದು. ಸರ್ಕಾರ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ನಿವೃತ್ತಿಯಿಂದಾಗಿ ಖಾಲಿಯಾಗಿರುವ 2.65 ಲಕ್ಷ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು. ಅಲ್ಲದೆ ಪ್ರಾಥಮಿಕ/ ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳ ಪರಿಹರಿಸುವಂತೆ ಒತ್ತಾಯಿಸಿ ಶಾಸಕರುಗಳಾದ ಎಸ್.ಎ. ರವೀಂದ್ರನಾಥ್, ಪ್ರೊ ಎನ್. ಲಿಂಗಣ್ಣ ಹಾಗೂ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳ ಗಮನ ಸೆಳೆಯುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ ಹಾಗೂ ಸಂಘದ ಪದಾಧಿಕಾರಿಗಳು, ನಿರ್ದೇಶಕರು ನಾಮನಿರ್ದೇಶಿತ ಸದಸ್ಯರು, ವೃತ್ತಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *