Connect with us

Dvgsuddi Kannada | online news portal | Kannada news online

ದಾವಣಗೆರೆ: ಸಚಿವರ ಹೆಸರು ದುರುಪಯೋಗ ಮಾಡಿಕೊಂಡು ಕೋಟೆಹಾಳು, ಹಲುವಾಗಿಲು ಬಳಿ ಅಕ್ರಮ ಮರಳು ಗಣಿಗಾರಿಕೆ; ಸಮಗ್ರ ತನಿಖೆಗೆ ಆಗ್ರಹ

IMG 20231216 130511

ದಾವಣಗೆರೆ

ದಾವಣಗೆರೆ: ಸಚಿವರ ಹೆಸರು ದುರುಪಯೋಗ ಮಾಡಿಕೊಂಡು ಕೋಟೆಹಾಳು, ಹಲುವಾಗಿಲು ಬಳಿ ಅಕ್ರಮ ಮರಳು ಗಣಿಗಾರಿಕೆ; ಸಮಗ್ರ ತನಿಖೆಗೆ ಆಗ್ರಹ

ದಾವಣಗೆರೆ: ಗಣಿ, ಭೂ ವಿಜ್ಞಾನ ಇಲಾಖೆ ಸಚಿವರ ಹೆಸರು ದುರುಪಯೋಗ ಮಾಡಿಕೊಂಡು ಹೊನ್ನಾಳಿ ತಾಲ್ಲೂಕಿನ ಕೋಟೆಹಾಳು ಹಾಗೂ ಹರಪನಹಳ್ಳಿ ತಾಲ್ಲೂಕಿನ ಹಲುವಾಗಿಲು ಗ್ರಾಮಗಳ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ನಡೆಸಬೇಕು ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ವತಿಯಿಂದ ಜಿಲ್ಲಾ ಭೂ ವಿಜ್ಞಾನ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹೊನ್ನಾಳಿ ತಾಲ್ಲೂಕಿನ ಕೋಟೆಹಾಳು ಗ್ರಾಮಸ್ಥರು, ಭೂ ವಿಜ್ಞಾನ ಇಲಾಖೆ ಸಚಿವರ ಹೆಸರು ದುರುಪಯೋಗ ಮಾಡಿಕೊಂಡು, ಕೋಟೆಹಾಳು ಹಾಗೂ ಹರಪನಹಳ್ಳಿ ತಾಲ್ಲೂಕು ಹಲುವಾಗಿಲು ಗ್ರಾಮಗಳ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸಿದ್ದಾರೆ ಎಂದು ವೇದಿಕೆ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಗಣಿ ಮತ್ತುವಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ಅವರಿಗೆ ಮನವಿ ಸಲ್ಲಿಸುವುದಾಗಿ ಪ್ರತಿಭಟನಕಾರರು ತಿಳಿಸಿದರು.

ಈ ಬಗ್ಗೆ ಇಲಾಖೆಗೆ ಮನವಿ ಸಲ್ಲಿಸಿದ್ದರೂ, ನಮ್ಮ ಮನವಿಗೆ ಸ್ಪಂದಿಸಿಲ್ಲ. ಪ್ರಕೃತಿಗೆ ಧಕ್ಕೆ ಆಗುವ ರೀತಿ ಗಣಿಗಾರಿಕೆ ನಡೆಸಿದ್ದು, ಮರಳು ತೆಗೆದ ಬಳಿಕ ಗುಂಡಿಗಳನ್ನು ಮುಚ್ಚಿಲ್ಲ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಹಲವಾಗಿಲು ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ಪಡೆದಿದ್ದರೇ? ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top