ದಾವಣಗೆರೆಗೆ ಶಂಕಿತ ಉಗ್ರರರ ಲಿಂಕ್..?; ಆಜಾದ್ ನಗರ ನಿವಾಸಿ ವಶಕ್ಕೆ ಪಡೆದ ಸಿಸಿಬಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಹಿನ್ನೆಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ಸೆರೆ ಸಿಕ್ಕ ಶಂಕಿತರ ಉಗ್ರರಿಗೆ ದಾವಣಗೆರೆಯ ಲಿಂಕ್ ಇದ್ಯಾ ಎಂಬ ಸಂಶಯ ವ್ಯಕ್ತವಾಗಿದೆ. ಸಿಸಿಬಿ ದಾವಣಗೆರೆಯ ಆಜಾದ್ ನಗರದ ನಿವಾಸಿ ಫಯಾಜ್ ವುಲ್ಲಾ‌ (30) ವಿಚಾರಣೆ ನಡೆಸುತ್ತಿದೆ.

ಇಂದು ಬೆಳಿಗ್ಗೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾವಣಗೆರೆ ಆಗಮಿಸಿ ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಅಕ್ರಮವಾಗಿ ಆಯುಧ ಮಾರಾಟ ವಿಚಾರವಾಗಿ ಇತನ ಮೇಲೆ ಐದು ಪ್ರಕರಣ ದಾಖಲಾಗಿದ್ದವು. ಜಾಮೀನು ಮೇಲೆ ಹೊರಗಿದ್ದ ಈತನನ್ನು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಬೆಂಗಳೂರಲ್ಲಿ ಸ್ಫೋಟಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಜುಲೈ 19 ರಂದು ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದರು. ಇವರ ಬಳಿ ಇದ್ದ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆ ಮೂಲಕ ರಾಜಧಾನಿಯಲ್ಲಿ ನಡೆಯುತ್ತಿದ್ದ ಉಗ್ರರ ಪ್ಲಾನ್ ಅನ್ನು ವಿಫಲಗೊಳಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *