Connect with us

Dvgsuddi Kannada | online news portal | Kannada news online

ಕರ್ನಾಟಕ ಬಂದ್ ಮಾಡಿಯೇ ಸಿದ್ಧ, ಸಾಧ್ಯವಾದರೆ ಸರಕಾರ ನಮ್ಮ ಬಂದ್ ತಡೆಯಲಿ: ವಾಟಾಳ್ ನಾಗರಾಜ್

ಪ್ರಮುಖ ಸುದ್ದಿ

ಕರ್ನಾಟಕ ಬಂದ್ ಮಾಡಿಯೇ ಸಿದ್ಧ, ಸಾಧ್ಯವಾದರೆ ಸರಕಾರ ನಮ್ಮ ಬಂದ್ ತಡೆಯಲಿ: ವಾಟಾಳ್ ನಾಗರಾಜ್

ಬೆಂಗಳೂರು :  ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5 ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ರಾಜ್ಯದ ಕನ್ನಡ ಪರ ಸಂಘಟನೆಗಳು ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ದನಿ ಎತ್ತಿದ್ದಾರೆ. ಕೂಡಲೇ ಸರಕಾರ ತಮ್ಮ ನಿಲುವನ್ನು ಬದಲಿಸಬೇಕು ,  ಇಲ್ಲದಿದ್ದಲ್ಲಿ ಬಂದ್ ಶತಃಸಿದ್ಧ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯಾವುದೇ ಕಾರಣಕ್ಕೂ ಡಿಸೆಂಬರ್ 5ರ ಬಂದ್ ಹಿಂಪಡೆಯುವುದಿಲ್ಲ. ಬಂದ್ ಮಾಡಿಯೇ ಸಿದ್ದ.  ಸಾಧ್ಯವಾದರೆ ಸರಕಾರ ನಮ್ಮ ಬಂದ್ ತಡೆಯಲಿ.  ಡಿ. 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದಿದ್ದಾರೆ. ಮರಾಠ ನಿಗಮ ರಚನೆಯನ್ನು ಕೈಬಿಡಲು ನವೆಂಬರ್ 30ರ ವರೆಗೆ ಕಾಲಾವಕಾಶ ನೀಡಿದ್ದು ಸರಕಾರ ಇದಕ್ಕೆ ಸ್ಪಂದಿಸದಿದ್ದಲ್ಲಿ ಬಂದ್ ಬಿಸಿ ತಾಗಲಿದೆ ಎಂದಿದ್ದಾರೆ.

ಕರ್ನಾಟಕ ಬಂದ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ಭಾಗವಹಿಸಲು ವಾಟಾಳ್ ನಾಗರಾಜ್ ಮನವಿಯನ್ನು ಮಾಡಿದ್ದಾರೆ.ಕರ್ನಾಟಕ ಬಂದ್ ಗೆ  ಈವರೆಗೆ  ಓಲಾ, ಉಬರ್, ಆಟೋ, ಟ್ಯಾಕ್ಸಿ ಸಂಘ ಹಾಗೂ  ವಕೀಲರ ಸಂಘ ಬೆಂಬಲ ನೀಡಿದ್ದಾರೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top