ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಬೀಕರ ದುರಂತ ಸಂಭವಿಸಿದೆ. ಬಿಬಿಎಂಪಿ ವ್ಯಾಪ್ತಿಯ ಲಕ್ಕಸಂದ್ರ ಬಳಿ ಮಟ್ರೋ ಕಾರ್ಮಿಕರು ವಾಸವಿದ್ದ ಮೂರು ಅಂತಸ್ತಿನ ಕಟ್ಟಡ ಇದ್ದಕ್ಕಿದ್ದಂತೆ ನೆಲಕ್ಕುರುಳಿ ಬಿದ್ದಿದೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ.
ಈ ಕಟ್ಟಡದಲ್ಲಿ 20 ಕ್ಕೂ ಹೆಚ್ಚು ಕಾರ್ಮಿಕರು ವಾಪಸವಿದ್ದರು. ತುಂಬಾ ಹಳೇಯದಾದ ಕಟ್ಟಡ ಕುಸಿಯುವ ಮುನ್ಸೂಚನೆ ಬಂದ ತಕ್ಷಣ ಎಲ್ಲರು ಮನೆಯಿಂದ ಹೊರ ಬಂದಿದ್ಧಾರೆ. ಶಾಸಕ ರಾಮಲಿಂಗಾರೆಡ್ಡಿ ಮನೆ ಸಮೀಪವೇ ಈ ಘಟನೆ ನಡೆದಿದೆ. ಹಳೇ ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ. ಕಟ್ಟಡ ಕುಸಿಯುವುದಕ್ಕಿಂತ ಮುನ್ನ ಅಗ್ನಿಶಾಮಕ ಸಿಬ್ಬಂದಿ ಮೆಟ್ರೋ ಕಾರ್ಮಿಕರನ್ನು ಸೇವ್ ಮಾಡಿದ್ದಾರೆ. ಸುರೇಶ್ ಎಂಬುವವರಿಗೆ ಕಟ್ಟಡ ಸೇರಿದೆ ಎಂಬ ಮಾಹಿತಿ ತಿಳಿದು ಬಂದಿದೆ.



