ತೀವ್ರ ಮಳೆ ಕೊರತೆ; ರಾಜ್ಯದ 195 ತಾಲ್ಲೂಕ್ ಬರಪೀಡಿತ ಎಂದು ಘೋಷಿಸಿದ ಸರ್ಕಾರ; ದಾವಣಗೆರೆ ಜಿಲ್ಲೆಯ ಆರು ತಾಲ್ಲೂಕಿನಲ್ಲಿಯೂ ಬರ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ತೀವ್ರ ಮಳೆ ಕೊರತೆ ಹಿನ್ನೆಲೆ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿಯಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಈ ಹೀಗಾಗಿ ಜಿಲ್ಲೆಯ ಎಲ್ಲಾ‌ ತಾಲ್ಲೂಕ್ ಗಳು ಬರ ಪಟ್ಟಿಯಲ್ಲಿವೆ.

ದಾವಣಗೆರೆಯ ಮುಖ್ಯ ಬೆಳೆಯಾದ ಮೆಕ್ಕೆಜೋಳ, ಭತ್ತ, ಅಡಿಕೆಗೆ ತೀವ್ರ ನೀರಿನ ಕೊರತೆ ಉಂಟಾಗಿದೆ. ಈ ಎಲ್ಲಾ ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಂಡ ನಂತರ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಿಸಲಾಗಿದೆ.

ಸಂಬಂಧ ಪಟ್ಟ ಜಿಲ್ಲಾಧಿಕಾಧಿಕಾರಿಗಳು ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *