ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಸಾಮಾಜಿಕ ಕಾರ್ಯಕರ್ತೆ ಬಿ.ಟಿ. ಲಲಿತಾ ನಾಯಕ್ ಸ್ಪೋಟಕ ಹೇಳಿಕೆ ನೀಡಿದ್ದರಿಂದ ರಾಜ್ಯ ಸರ್ಕಾರ ಶಿವರಾಜ್ ಕುಮಾರ್ ಅವರಿಗೆ ಭದ್ರತೆಗಾಗಿ ಗನ್ ಮ್ಯಾನ್ ನೀಡಿದೆ.
ಭದ್ರತೆ ಬಗ್ಗೆ ಹೆಚ್ಚು ಒತ್ತು ನೀಡಿರುವ ಗೃಹ ಸಚಿವಾಲಯ ನಟ ಶಿವರಾಜ್ ಕುಮಾರ್ ಮನೆಗೆ ಹೆಚ್ಚಿನ ಭದ್ರತೆಯನ್ನು ಒದಗಿಸಿದೆ. ಎರಡು ಪಾಳಯದಲ್ಲಿ ನಾಲ್ಕು ಪೊಲೀಸರು ಹಾಗೂ ಗನ್ ಮ್ಯಾನ್ ಗಳನ್ನು ನಿಯೋಜನೆ ಮಾಡಿದೆ. ನಟ ಶಿವರಾಜ್ ಕುಮಾರ್ ಮನೆಯ ಬಳಿ ಪೊಲೀಸರು ಕಾವಲಿದ್ದು, ಭದ್ರತೆ ನೀಡುತ್ತಿದ್ದಾರೆ.



