Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರಿಂದ ವಿವಿಧ ಬೆಳೆಗಳ ವಿಮಾ ನೋಂದಣಿಗೆ ಅವಕಾಶ

IMG 20230711 194449

ದಾವಣಗೆರೆ

ದಾವಣಗೆರೆ: ರೈತರಿಂದ ವಿವಿಧ ಬೆಳೆಗಳ ವಿಮಾ ನೋಂದಣಿಗೆ ಅವಕಾಶ

ದಾವಣಗೆರೆ: ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ 2023-24ನೇ ಸಾಲಿನ ತೋಟಗಾರಿಕಾ ಬೆಳೆಗಳಿಗೆ ವಿಮಾ ನೋಂದಣಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ವಿಮಾ ಯೋಜನೆ: ಅಡಿಕೆ ಬೆಳೆ ವಿಮೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ, ಎಲ್ಲಾ ಗ್ರಾಮ ಪಂಚಾಯಿತಿಗಳ ರೈತರು, ಕಾಳು ಮೆಣಸು ಬೆಳೆ ವಿಮೆಗೆ ಚನ್ನಗಿರಿ ತಾಲ್ಲೂಕಿನ ಆಯ್ದ ಗ್ರಾಮ ಪಂಚಾಯಿತಿಗಳ ರೈತರು, ದಾಳಿಂಬೆ ಬೆಳೆ ವಿಮೆಗೆ ಚನ್ನಗಿರಿ, ದಾವಣಗೆರೆ ಮತ್ತು ಜಗಳೂರು ತಾಲ್ಲೂಕಿನ ಆಯ್ದ ಗ್ರಾಮಗಳು, ಮಾವು ಬೆಳೆ ವಿಮೆಗೆ ಚನ್ನಗಿರಿ ತಾಲ್ಲೂಕಿನ ಆಯ್ದ ಗ್ರಾಮಗಳು, ವಿಳ್ಯದೆಲೆ ಬೆಳೆ ವಿಮೆಗೆ ಹೊನ್ನಾಳಿ, ನ್ಯಾಮತಿ, ಚನ್ನಗಿರಿ, ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಆಯ್ದ ಗ್ರಾಮಗಳ ರೈತರು ನೋಂದಣಿ ಮಾಡಿಸಬಹುದು.

ರೈತರು ತಮ್ಮ ಬೆಳೆಗಳಿಗೆ ವಿಮಾ ಕಂತನ್ನು ಹತ್ತಿರದ ಬ್ಯಾಂಕ್, ಗ್ರಾಮ ಒನ್, ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಿ ವಿಮಾ ಯೋಜನೆಗೆ ಪಾವತಿಸಿ ನೋಂದಾಹಿಸಬಹುದು. ನೋಂದಣಿಯಾಗಲು ಜುಲೈ.15 ಕೊನೆಯ ದಿನಾಂಕವಾಗಿರುತ್ತದೆ. ವಿಮಾ ಸಂಸ್ಥೆಯ ಟೋಲ್ ಫ್ರೀ ನಂ.18002660700ಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ರೈತರು ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top