ದಾವಣಗೆರೆ: ಬೆಳೆ ವಿಮೆ ಯೋಜನೆಯಡಿ 2021-22ರಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಿಗೆ ಸ೦ಬ೦ಧಿಸಿದಂತೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಆಹ್ವಾನಿಸಲಾಗಿದ್ದು, ಸಲ್ಲಿಸಲು ಏ. 15 ಕೊನೆಯ ದಿನವಾಗಿದೆ.
2021-22ರ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಲ್ಲಿ ವಿಮಾ ಪರಿಹಾರ ಪಡೆಯಲು ಅರ್ಹರಿದ್ದು, ಬೆಳೆಯ ಸಮೀಕ್ಷೆ ವಿವರದೊ೦ದಿಗೆ ಬೆಳೆ ಹೋಲಿಕೆ ಮಾಡಿದ ನ೦ತರ ತಾಳೆಯಾಗದ ಕೆಲ ಪ್ರಸ್ತಾವನೆಗಳನ್ನು ಸಂಬಂಧಿಸಿದ ವಿಮಾ ಕ೦ಪನಿಯವರು ತಿರಸ್ಕರಿಸಿ ವಿಮಾ ಮೊತ್ತ ಜಮ ಮಾಡಿರುವುದಿಲ್ಲ.
ಈ ರೀತಿ ಬೆಳೆ ಸಮೀಕ್ಷೆ ವಿವರಗಳೊ೦ದಿಗೆ ಹೊ೦ದಾಣಿಕೆಯಾಗದೇ ತಿರಸ್ಕೃತಗೊಂಡ
ಪ್ರಸ್ತಾವನೆಗಳನ್ನು ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರದರ್ಶಿಸಲಾಗಿರುತ್ತದೆ. ರೈತರು ಆಕ್ಷೇಪಣೆಯೊಂದಿಗೆ ವಿಮಾ ಕಂತು ಪಾವತಿಸಿದ ರಸೀದಿ, 2021 -22ರ ಪಹಣಿಯಲ್ಲಿ ವಿಮೆಗೆ ನೋ೦ದಾಯಿಸಿದ ಬೆಳೆ ನಮೂದಾಗಿರಬೇಕು, ಬೆಂಬಲ
ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಸೀದಿ ಲಗತ್ತಿಸಬೇಕು.ವಿಮೆಗೆ ನೋಂದಾಯಿತ ಬೆಳೆ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಲ್ಲಿ ರಸೀದಿ ಲಗತ್ತಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.