Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಳೆ ವಿಮೆ ಯೋಜನೆಯಡಿ‌ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿ ಆಹ್ವಾನ

images 8 2

ದಾವಣಗೆರೆ

ದಾವಣಗೆರೆ: ಬೆಳೆ ವಿಮೆ ಯೋಜನೆಯಡಿ‌ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿ ಆಹ್ವಾನ

ದಾವಣಗೆರೆ: ಬೆಳೆ ವಿಮೆ ಯೋಜನೆಯಡಿ 2021-22ರಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಿಗೆ ಸ೦ಬ೦ಧಿಸಿದಂತೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಆಹ್ವಾನಿಸಲಾಗಿದ್ದು, ಸಲ್ಲಿಸಲು ಏ. 15 ಕೊನೆಯ ದಿನವಾಗಿದೆ.

2021-22ರ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಲ್ಲಿ ವಿಮಾ ಪರಿಹಾರ ಪಡೆಯಲು ಅರ್ಹರಿದ್ದು, ಬೆಳೆಯ ಸಮೀಕ್ಷೆ ವಿವರದೊ೦ದಿಗೆ ಬೆಳೆ ಹೋಲಿಕೆ ಮಾಡಿದ ನ೦ತರ ತಾಳೆಯಾಗದ ಕೆಲ ಪ್ರಸ್ತಾವನೆಗಳನ್ನು ಸಂಬಂಧಿಸಿದ ವಿಮಾ ಕ೦ಪನಿಯವರು ತಿರಸ್ಕರಿಸಿ ವಿಮಾ ಮೊತ್ತ ಜಮ ಮಾಡಿರುವುದಿಲ್ಲ.

ಈ ರೀತಿ ಬೆಳೆ ಸಮೀಕ್ಷೆ ವಿವರಗಳೊ೦ದಿಗೆ ಹೊ೦ದಾಣಿಕೆಯಾಗದೇ ತಿರಸ್ಕೃತಗೊಂಡ
ಪ್ರಸ್ತಾವನೆಗಳನ್ನು ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರದರ್ಶಿಸಲಾಗಿರುತ್ತದೆ. ರೈತರು ಆಕ್ಷೇಪಣೆಯೊಂದಿಗೆ ವಿಮಾ ಕಂತು ಪಾವತಿಸಿದ ರಸೀದಿ, 2021 -22ರ ಪಹಣಿಯಲ್ಲಿ ವಿಮೆಗೆ ನೋ೦ದಾಯಿಸಿದ ಬೆಳೆ ನಮೂದಾಗಿರಬೇಕು, ಬೆಂಬಲ
ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಸೀದಿ ಲಗತ್ತಿಸಬೇಕು.ವಿಮೆಗೆ ನೋಂದಾಯಿತ ಬೆಳೆ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಲ್ಲಿ ರಸೀದಿ ಲಗತ್ತಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top