Connect with us

Dvgsuddi Kannada | online news portal | Kannada news online

ಸಮಗ್ರ ತೋಟಗಾರಿಕೆ ಕೌಶಲ್ಯಾಭಿವೃದ್ಧಿ ಕುರಿತು ಗ್ರಾಮೀಣ ಯುವಕರಿಗೆ 4 ದಿನ ತರಬೇತಿ

images 50

ಪ್ರಮುಖ ಸುದ್ದಿ

ಸಮಗ್ರ ತೋಟಗಾರಿಕೆ ಕೌಶಲ್ಯಾಭಿವೃದ್ಧಿ ಕುರಿತು ಗ್ರಾಮೀಣ ಯುವಕರಿಗೆ 4 ದಿನ ತರಬೇತಿ

ಶಿವಮೊಗ್ಗ: ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ತೋಟಗಾರಿಕೆ ವಿಸ್ತರಣೆಯ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಡಿ ಗ್ರಾಮೀಣ ಯುವಕರಿಗೆ ನ.27 ರಿಂದ ಡಿ.02 ರವರೆಗೆ 6 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿಯು ಪುಷ್ಪ ಬೆಳೆ ಉತ್ಕೃಷ್ಟ ಕೇಂದ್ರ, ತುಂಗಾ ತೋಟಗಾರಿಕೆ ಕ್ಷೇತ್ರ, ಶಿವಮೊಗ್ಗ ಹಮ್ಮಿಕೊಂಡಿದ್ದು, ಕನಿಷ್ಠ 5 ತರಗತಿ ಪಾಸಾಗಿರುವ 18 ರಿಂದ 33 ವರ್ಷದೊಳಗಿನ ಆಸಕ್ತ ಗ್ರಾಮೀಣ ಯುವಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರು/ ಪ್ರಾಜೆಕ್ಟ್ ಆಫೀಸರ್, ಪುಷ್ಪ ಬೆಳೆ ಉತ್ಕೃಷ್ಟ ಕೇಂದ್ರ, ಕಂಟ್ರಿ ಕ್ಲಬ್ ರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನ. 24ರೊಳಗಾಗಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295428 ನ್ನು ಸಂಪರ್ಕಿಸುವುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top