ಡ್ರಗ್ಸ್ ಮಾಫಿಯಾ:  ಸಿಸಿಬಿ ವಿಚಾರಣೆಗೆ ಹಾಜರಾದ ನಿರೂಪಕಿ ಅನುಶ್ರೀ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮಂಗಳೂರು:  ಡ್ರಗ್ಸ್ ಮಾಫಿಯಾಕ್ಕೆ ಸಬಂಧಿಸಿದಂತೆ ಇಂದು ಸಿಸಿಬಿ ವಿಚಾರಣೆಗೆ ನಟಿ, ನಿರೂಪಕಿ ಅನುಶ್ರೀ ಹಾಜರಾಗಿದ್ದರು. ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮುಂದೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇನೆ ಎಂದು ಹೇಳಿದರು.

ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಈ ವಿಚಾರಣೆ ನಡೆದಿದ್ದು, ಮೂರೂವರೆ ಗಂಟೆಗಳ ಸತತವಾಗಿ ನಡೆದ ವಿಚಾರಣೆ ಮುಕ್ತಾಯವಾಗಿದೆ. ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅನುಶ್ರೀ, ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯವಿತ್ತು. ತರುಣ್ ರಾಜ್ ನನಗೆ 6 ತಿಂಗಳು ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದಾರೆ. ಈ ವೇಳೆ ಮಾತ್ರ ಅವರ ಪರಿಚಯವಾಗಿದೆ ಎಂದರು .

ಡ್ರಗ್ಸ್ ಬಗ್ಗೆ ತರಣ್ ಜೊತೆ ಯಾವುದೇ ಸಂಬಂಧ ಇಲ್ಲ. ಅವರ ಡ್ಯಾನ್ಸ್ ಕ್ಲಾಸ್ ಉದ್ಘಾಟನೆ ಮಾಡಿಕೊಟ್ಟಿದ್ದೆ. ಅದು ಬಿಟ್ಟರೆ ಅವರ ಪರಿಚಯ ನನಗೆ ಅಷ್ಟೇನೂ ಇಲ್ಲ. ಅವರ ಪರಿಚಯವಿದ್ದ ಕಾರಣ ನನ್ನನ್ನು ವಿಚಾರಣೆಗೆ ಕರೆಸಿದ್ದರು. ಪೊಲೀಸರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಇವತ್ತು ಮುಂದಿನ ವಿಚಾರಣೆ ಬಗ್ಗೆ ಪೊಲೀಸರು ಏನೂ ಹೇಳಿಲ್ಲ ಎಂದರು.

ನಾನು ಅವರೊಟ್ಟಿಗೆ ಯಾವುದೇ ಪಾರ್ಟಿಯನ್ನು ಮಾಡಿಲ್ಲ ಎಂದು ಅನುಶ್ರೀ ಸ್ಪಷ್ಟ ಪಡಿಸಿದರು. ಡ್ರಗ್ಸ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೋಲಿಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದು ಇದೇ ವೇಳೆ ತಿಳಿಸಿದರು.

ಮಂಗಳೂರಿನ ಪಣಂಬೂರು ಠಾಣೆಯಲ್ಲಿ ನಿರೂಪಕಿ ಅನುಶ್ರೀ ವಿಚಾರಣೆಗೆ ಇಂದು ಹಾಜರಾಗಿದ್ದರು. ಶುಕ್ರವಾರವೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಹೋಗಿದ್ದರು. ಆದರೆ ಮಂಗಳೂರು ತಲುಪುತ್ತಿದ್ದಂತೆ ಅನುಶ್ರೀ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದು ಬೆಳಗ್ಗೆ ಪಣಂಬೂರು ಠಾಣೆಗೆ ತೆರಳಿ ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಪೊಲೀಸರ ವಿಚಾರಣೆ ಎದುರಿಸಿದರು.

ಈಗಾಗಲೇ ಬಂಧನವಾಗಿರುವ ಕಿಶೋರ್, ತರುಣ್, ನೌಶೀನ್ ಮಂಗಳೂರಿನ ಪಾಂಡೇಶ್ವರದಲ್ಲಿನ ಇಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *