ನವದೆಹಲಿ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಬಂಧಿಸಿರುವ ಮಹಾರಾಷ್ಟ್ರ ಸರ್ಕಾರ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಮಾಡಿದ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಕಿಡಿಕಾರಿದ್ದಾರೆ.
ಇದು ತುರ್ತುಪರಿಸ್ಥಿತಿ ದಿನಗಳನ್ನು ನೆನಪಿಸುತ್ತದೆ. ಮಹಾರಾಷ್ಟ್ರದಲ್ಲಿ ನಡೆದಿರುವ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದ ಮೇಲೆ ನಡೆದಿರುವ ಈ ದಾಳಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುತ್ತದೆ ಎಂದಿದ್ದಾರೆ.
53 ವರ್ಷದ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಮಾಡಿಕೊಂಡ ಆರೋಪದ ಮೇಲೆ ಅರ್ನಬ್ ಗೋಸ್ವಾಮಿಯನ್ನು ಬುಧವಾರ ಮುಂಬೈನ ಬಂಧಿಸಿದ್ದಾರೆ.



