ಬೆಂಗಳೂರು: ಸಿಲಿಕಾನ್ ಬೆಂಗಳೂರಿನಲ್ಲಿ ಇಂದು(ಸೆ.23) ಮತ್ತೊಂದು ಘೋರ ದುರಂತ ಸಂಭವಿಸಿದೆ. ಇತ್ತೀಚೆಗೆ ನಡೆದ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ದುರಂತ ಮಾಸುವ ಮುನ್ನವೇ ಮತ್ತೊಂದು ಭೀಕರ ಸ್ಫೋಟಕ್ಕೆ ಮೂವರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತಗರುಪೇಟೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಸ್ಫೋಟಕ್ಕೆ ಮೂವರು ಸಾವನ್ನಪ್ಪಿದ್ದು, 4 ಗಾಯಗೊಂಡಿದ್ದಾರೆ. ಗಾಯಗೊಂಡವನ್ನು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರ ಛಿದ್ರಗೊಂಡಿವೆ. ತೀವ್ರತರವಾದ ಸ್ಫೋಟದ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ದೇಹಗಳು ಸ್ಫೋಟದ ತೀವ್ರತೆಗೆ ಒಂದಷ್ಟು ದೂರ ಹಾರಿ ಹೋಗಿ ಬಿದ್ದಿದ. ಈ ಘಟನೆ ಸ್ಥಳೀಯ ಜನರು ತೀವ್ರ ಆತಂಕ ಉಂಟು ಮಾಡಿದೆ.



