Connect with us

Dvgsuddi Kannada | online news portal | Kannada news online

ಬಳ್ಳಾರಿ: ಜಿಂದಾಲ್ ಕಾರ್ಖಾನೆ ಡಂಪಿಂಗ್ ಯಾರ್ಡ್‌ನಲ್ಲಿ ಮಣ್ಣು ಕುಸಿದು ಇಬ್ಬರ ಸಾವು

ದಾವಣಗೆರೆ

ಬಳ್ಳಾರಿ: ಜಿಂದಾಲ್ ಕಾರ್ಖಾನೆ ಡಂಪಿಂಗ್ ಯಾರ್ಡ್‌ನಲ್ಲಿ ಮಣ್ಣು ಕುಸಿದು ಇಬ್ಬರ ಸಾವು

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನಲ್ಲಿರುವ  ಜಿಂದಾಲ್ ಕಾರ್ಖಾನೆ (ಜೆಎಸ್‌ಡಬ್ಲ್ಯು) ಡಂಪ್‌ ಯಾರ್ಡ್‌ನಲ್ಲಿ ಮಣ್ಣು ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ರಾಜಾಪುರ ಗ್ರಾಮದ ನಿವಾಸಿ ಹೊನ್ನೂರಸ್ವಾಮಿ (18) ಹಾಗೂ ತುಮಟಿ ಗ್ರಾಮದ ನಿವಾಸಿ ರಾಮಾಂಜೆನೇಯ (50) ಎಂದು ಗುರುಸಿಸಲಾಗಿದೆ.  ಜಿಂದಾಲ್ ಕಾರ್ಖಾನೆ ಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಡಂಪಿಂಗ್ ಯಾರ್ಡ್ ನಲ್ಲಿ ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ ಕಬ್ಬಿಣದ ಚೂರುಗಳು ಇರುತ್ತವೆ. ಯಾರ್ಡ್’ಗೆ ಪ್ರವೇಶಿಸುವ ಕೆಲವರು ಆ ಕಬ್ಬಿಣದ ಚೂರುಗಳನ್ನು ಆಯ್ದುಕೊಂಡು ಹೊರಗೆ ಮಾರಾಟ ಮಾಡಿಕೊಳ್ಳುತ್ತಾರೆ.ಇದು ಬಹಳ ವರ್ಷಗಳಿಂದರೂ ನಡೆದುಕೊಂಡು ಬಂದಿದ್ದು, ಕಬ್ಬಿಣದ ಬೆಲೆ ಹೆಚ್ಚಾಗಿದ್ದರಿಂದ ಆಯ್ದುಕೊಳ್ಳುವವರ ಸಂಖ್ಯೆಯೂ ಹೆಚ್ಚಾಗಿದೆ. ಅಲ್ಲಿನ ಸೆಕ್ಯುರಿಟಿ ಗಾರ್ಡ್’ಗಳ ಕಣ್ತಪ್ಪಿಸಿ ಒಳ ಬಂದ ಕಾರ್ಮಿಕರು ಮಣ್ಣಿನ  ಕುಸಿದ ಪರಿಣಾಮವಾಗಿ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top