Connect with us

Dvgsuddi Kannada | online news portal | Kannada news online

ಕೆಎಎಸ್ ಅಧಿಕಾರಿ ಖಜಾನೆ ನೋಡಿ ದಂಗಾದ ಎಸಿಬಿ ಅಧಿಕಾರಿಗಳು ;  ಚಿನ್ನಾಭರಣ ಮೌಲ್ಯ ಪತ್ತೆಗೆ ಅಕ್ಕಸಾಲಿ ಭೇಟಿ

ಪ್ರಮುಖ ಸುದ್ದಿ

ಕೆಎಎಸ್ ಅಧಿಕಾರಿ ಖಜಾನೆ ನೋಡಿ ದಂಗಾದ ಎಸಿಬಿ ಅಧಿಕಾರಿಗಳು ;  ಚಿನ್ನಾಭರಣ ಮೌಲ್ಯ ಪತ್ತೆಗೆ ಅಕ್ಕಸಾಲಿ ಭೇಟಿ

ಡಿವಿಜಿ ಸುದ್ದಿ, ಬೆಂಗಳೂರು: ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಮನೆ ಮೇಲೆ ಬೆಳ್ಳಂಬೆಳಗೆ ಎಸಿಬಿ ದಾಳಿ ನಡೆಸಿದ್ದು, ಅಲ್ಲಿ ಸಿಕ್ಕ ಚಿನ್ನಾಭರಣ, ನಗರದು ಹಣ, ಭೂ ದಾಖಲೆಗಳನ್ನು ನೋಡೊದ  ಎಸಿಬಿ ಅಧಿಕಾರಿಗಳೇ ದಂಗಾದರು.

ಡಾ.ಬಿ. ಸುಧಾ ನಿವಾಸದಲ್ಲಿ ಅಪಾರ ಪ್ರಮಾಣದಲ್ಲಿ ಚಿನ್ನಾಭರಣ, ಆಸ್ತಿ ಪತ್ರಗಳು ಪತ್ತೆಯಾಗಿವೆ.ಬೆಂಗಳೂರಿನ ಕೋಡಿಹಳ್ಳಿಯಲ್ಲಿರುವ ಸುಧಾ ಅವರ ನಿವಾಸದಲ್ಲಿ ಎಸಿಬಿ ಅಧಿಕಾರಿಗಳಿಗೆ ಕೆಜಿಗಟ್ಟಲೆ ಚಿನ್ನ, 10 ಲಕ್ಷ ರೂ. ನಗದು ಹಾಗೂ ದಾಖಲೆ ಪತ್ರಗಳು ಪತ್ತೆಯಾಗಿದ್ದು, ಇನ್ನೂ ಕೂಡ ಶೋಧ ಕಾರ್ಯ ಮುಂದುವರೆದಿದೆ. ಚಿನ್ನಾಭರಣ ಮೌಲ್ಯ ಪತ್ತೆಗೆ ಅಧಿಕಾರಿಗಳು ಅಕ್ಕಸಾಲಿಯನ್ನು ಕರೆಸಿದ್ದಾರೆ.

acb raid 2

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿಯಾಗಿರುವ ಡಾ.ಸುಧಾ, ಈ ಹಿಂದೆ ಬಿಡಿಎಯಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದರು. ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ನೇತೃತ್ವದ ತಂಡದಿಂದ ಸುಧಾ ಅವರ ಬೆಂಗಳೂರಿನ ಕೋಡಿಹಳ್ಳಿ ನಿವಾಸ, ಯಲಹಂಕದ ಫ್ಲಾಟ್, ಬ್ಯಾಟರಾಯನಪುರ, ಬಿಇಎಂಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೆ  ದಾಳಿ ನಡೆಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top