ವಾರಾಂತ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ KSRTC  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ವಾರಾಂತ್ಯ ದಿನಗಳಲ್ಲಿ KSRTC  ಪ್ರತಿಷ್ಠಿತ ಸಾರಿಗೆ ಬಸ್ ಗಳಿಗೆ  ವಿಧಿಸುತ್ತಿದ್ದ ಶೇ.10ರಷ್ಟು  ಹೆಚ್ಚುವರಿ ಪ್ರಯಾಣದ ದರವನ್ನು ರದ್ದುಪಡಿಸಿದೆ.

ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರ ಬರೆದಿದ್ದಾರೆ.ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಪ್ರತಿಷ್ಠಿತ ಹವಾನಿಯಂತ್ರಿತ ಸಾರಿಗೆಗಳಲ್ಲಿ ಪ್ರಯಾಣಿಸಲು ಸಾರ್ವಜನಿಕರು ಆಸಕ್ತಿಯನ್ನು ತೋರುತ್ತಿಲ್ಲ. ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆಗಳಲ್ಲಿ ವಾರಾಂತ್ಯ ದಿನಗಳಂದು ಶೇ.10 ಹೆಚ್ಚುವರಿ ಪ್ರಯಾಣದರ ಇಲ್ಲ.

ಇನ್ನು ಖಾಸಗಿ ಬಸ್ ಮತ್ತು ಪ್ರತಿಷ್ಠಿತ ಸಾರಿಗೆಗಳಲ್ಲಿನ ಪ್ರಯಾಣದರ ನಿಗಮದ ಸಾರಿಗೆಗಳಲ್ಲಿ ನಿಗದಿಪಡಿಸಿದ ಪ್ರಯಾಣದರಕ್ಕಿಂತ ಕಡಿಮೆಯಿದ್ದು, ಪ್ರಯಾಣಿಕರನ್ನು ನಿಗಮದ ಸಾರಿಗೆಗಳತ್ತ ಆಕರ್ಷಿಸುವ ದೃಷ್ಟಿಯಿಂದ ಪ್ರತಿಷ್ಠಿತ ಸಾರಿಗೆಗಳಲ್ಲಿ ವಾರಾಂತ್ಯ ದಿನಗಳಂದು ಶೇ.10 ರಷ್ಟು ಪ್ರಯಾಣದರವನ್ನು ಹೆಚ್ಚಿಸಿ ಪ್ರಯಾಣದರ ವಿಧಿಸುತ್ತಿರುವುದನ್ನು ಡಿಸೆಂಬರ್ 20 ರವರೆಗೆ ಹಿಂಪಡೆಯುವುದು ಸೂಕ್ತವೆಂದು ಭಾವಿಸಿ ನಿಗಮ ಈ ಆದೇಶವನ್ನು ಹೊರಡಿಸಿದೆ.

ಅಕ್ಟೋಬರ್ 10 ರಿಂದ ಡಿಸೆಂಬರ್ 31ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ವಾರದ ಎಲ್ಲಾ ದಿನಗಳಂದು ಅನುಮೋದಿತ ಏಕರೂಪ ಪ್ರಯಾಣದರವನ್ನು ಆಕರ್ಷಿಸಿ ಸಾರಿಗೆಗಳನ್ನು ಕಾರ್ಯಚರಿಸಲು ಕ್ರಮ ಕೈಗೊಳ್ಳುಬೇಕೆಂದು ಸೂಚಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *