Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ ಪ್ರದೇಶದಲ್ಲಿ ಮಳೆ ಚೇತರಿಕೆ: ಇಂದಿನ ಒಳ ಹರಿವು 1,518 ಕ್ಯೂಸೆಕ್ ; ನೀರಿನ ಮಟ್ಟ 141.7 ಅಡಿ

images 87

ಪ್ರಮುಖ ಸುದ್ದಿ

ಭದ್ರಾ ಜಲಾಶಯ ಪ್ರದೇಶದಲ್ಲಿ ಮಳೆ ಚೇತರಿಕೆ: ಇಂದಿನ ಒಳ ಹರಿವು 1,518 ಕ್ಯೂಸೆಕ್ ; ನೀರಿನ ಮಟ್ಟ 141.7 ಅಡಿ

ಭದ್ರಾವತಿ: ಭದ್ರಾ ಜಲಾಶಯದ ಪ್ರದೇಶದಲ್ಲಿ ಮಳೆ ಚೇತರಿಕೆ ಕಂಡಿದೆ. ಡ್ಯಾಂಗೆ ಒಳ ಹರಿವು ಸ್ವಲ್ಪ ಏರಿಕೆಯಾಗಿದೆ. ಇಂದು (ಜು.19) ಬೆಳಗ್ಗೆ ವೇಳೆಗೆ 1,518 ಕ್ಯೂಸೆಕ್ ಒಳ ಹರಿವಿದೆ. ಇಂದಿನ ನೀರಿನ ಮಟ್ಟ 141.7ಅಡಿಯಷ್ಟಿದ್ದು, ಕಳೆದ ವರ್ಷ ಇದೇ ದಿನ 182.1 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಡ್ಯಾಂ ನಿಂದ ನಾಲೆಗಳಿಗೆ ಒಳ ಹರಿವಿನ ಪ್ರಮಾಣದಲ್ಲಿ ನೀರು ಬಿಡಲಾಗಿತ್ತು.

ಈ ವರ್ಷ ನಿರೀಕ್ಷತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆ‌ ನೀರು ಸಂಗ್ರಹ ಕುಸಿದಿದೆ. ಕಳೆದ ವರ್ಷದ ಈ ದಿನಕ್ಕೆ ಹೋಲಿಸಿದ್ದರೆ 41 ಅಡಿಯಷ್ಟು ನೀರು ಕೊರತೆಯಲ್ಲಿದೆ. ಅರ್ಧ ಮಳೆಗಾಲ ಕಳೆದರೂ ಡ್ಯಾಂನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಭರ್ತಿಯಾಗಿಲ್ಲ. ಭದ್ರಾ ಅಚ್ಚುಕಟ್ಟು ಪ್ರದೇಶ ಭತ್ತ, ಅಡಿಕೆ, ತೆಂಗು, ಮೆಕ್ಕೆಜೋಳ ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ.

  • ಡ್ಯಾಂ ನೀರಿನ ಸಂಗ್ರಹದ ವಿವರ
  • ಇಂದಿನ ನೀರಿನ ಮಟ್ಟ 141.7 ಅಡಿ
  • ಪೂರ್ಣ ಮಟ್ಟ:186 ಅಡಿ
  • ಇಂದಿನ ಸಾಮರ್ಥ್ಯ: 23,803 ಟಿಎಂಸಿ
  • ಒಟ್ಟು ಸಾಮರ್ಥ್ಯ:71.535 ಟಿಎಂಸಿ
  • ಒಳ ಹರಿವು: 1,518 ಕ್ಯೂಸೆಕ್
  • ಒಟ್ಟು ಹೊರ ಹರಿವು: 164 ಕ್ಯೂಸೆಕ್
  • ಬಲದಂಡೆ ನಾಲೆ: 0.00 ಕ್ಯೂಸೆಕ್
  • ಎಡದಂಡೆ ನಾಲೆ: 0.00 ಕ್ಯೂಸೆಕ್
  • ಕಳೆದ ವರ್ಷ ಈ ದಿನ : 182.1ಅಡಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top