ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯ ಪ್ರದೇಶ ಸುತ್ತಮುತ್ತ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದು, ಒಳಹರಿವು ಸ್ವಲ್ಪ ಕಡಿಮೆಯಾಗಿದೆ. ನಿನ್ನೆ (ಜು.05) 30,167 ಕ್ಯೂಸೆಕ್ ಒಳ ಹರಿವು ಇತ್ತು. ಇಂದು (ಜು.06) 26,004 ಕ್ಯೂಸೆಕ್ ಒಳ ಹರಿವಿದ್ದು, ಸ್ವಲ್ಪ ತಗ್ಗಿದೆ. ಇಂದಿನ ನೀರಿನ ಮಟ್ಟ 160.11 ಅಡಿಗೆ ತಲುಪಿದೆ. ನಿನ್ನೆ 158.06 ಅಡಿ ಇತ್ತು.
ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಳ ಹರಿವು ಹೆಚ್ಚಳವಾಗಿದೆ. ಈ ಮಳೆ ಮುಂಗಾರು ಹಂಗಾಮಿನ ಭತ್ತ ಬೆಳೆಯುವ ರೈತರ ಸಂತಸಕ್ಕೆ ಕಾರಣವಾಗಿದ್ದು, ಭತ್ತ ನಾಟಿಗೆ ಬೀಜ ಚೆಲ್ಲುವ ಕಾರ್ಯ ನಡೆಯುತ್ತಿದೆ.
- ನೀರಿನ ಸಂಗ್ರಹದ ವಿವರ
- ಇಂದಿನ ನೀರಿನ ಮಟ್ಟ 160.11 ಅಡಿ
- ಪೂರ್ಣ ಮಟ್ಟ:186 ಅಡಿ
- ಇಂದಿನ ಸಾಮರ್ಥ್ಯ: 43.771 ಟಿಎಂಸಿ
- ಒಟ್ಟು ಸಾಮರ್ಥ್ಯ:71.535 ಟಿಎಂಸಿ
- ಒಳಹರಿವು: 26004 ಕ್ಯೂಸೆಕ್
- ಒಟ್ಟು ಹೊರಹರಿವು: 136 ಕ್ಯೂಸೆಕ್
- ಬಲದಂಡೆ ನಾಲೆ: 0.00 ಕ್ಯೂಸೆಕ್
- ಎಡದಂಡೆ ನಾಲೆ: 0.00ಕ್ಯೂಸೆಕ್
- ಕಳೆದ ವರ್ಷ ಈ ದಿನ : 155.34 ಅಡಿ