ಭದ್ರಾ ಡ್ಯಾಂ; ಕ್ರೆಸ್ಟ್ ಗೇಟ್ ಮೂಲಕ ಯಾವ ಸಮಯದಲ್ಲಾದರೂ ನದಿಗೆ ನೀರು ಬಿಡುಗಡೆ; ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ..! ನದಿ ಪಾತ್ರದಲ್ಲಿ ತಿರುಗಾಟ ನಿಷೇಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭದ್ರಾ ಜಲಾಶಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. ಜು.12 ರಂದು ಜಲಾಶಯದ ನೀರಿನ ಮಟ್ಟ 178 ಡಿಗ್ರಿ 10” ಅಡಿಗಿಂತ ಹೆಚ್ಚಾಗಿರುತ್ತದೆ.

ಪ್ರಸ್ತುತ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ 30200 ಕ್ಯೂಸೆಕ್ ಆಗಿದೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಇದೇ ರೀತಿ ಮುಂದುವರೆದಲ್ಲಿ ಭದ್ರಾ ಜಲಾಶಯವು ಗರಿಷ್ಠ ನೀರಿನ ಮಟ್ಟ 186 ಅಡಿಗಳಿಗೆ ಅತೀ ಶೀಘ್ರವಾಗಿ ಭರ್ತಿಯಾಗುವ ಸಂಭವಿರುತ್ತದೆ. ಅಣೆಕಟ್ಟು ಸುರಕ್ಷತೆಯ ಹಿತದೃಷ್ಠಿಯಿಂದ ಹಾಗೂ ಪ್ರವಾಹ ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಕ್ರೆಸ್ಟ್ ಗೇಟ್ ಮುಖಾಂತರ ನದಿಗೆ ಬಿಡಲಾಗುವುದು.

ಆದುದರಿಂದ ಭದ್ರಾ ನದಿಯ ಎಡ ಮತ್ತು ಬಲದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕೆಂದು ತಿಳಿಸಿದೆ. ಹಾಗೂ ನದಿಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ಕ.ನೀನಿ.ನಿ ಭದ್ರಾ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *