Connect with us

Dvgsuddi Kannada | online news portal | Kannada news online

ದಾವಣಗೆರೆ: ನ.22ರ ರಾತ್ರಿಯಿಂದ ಭದ್ರಾ ನಾಲೆಯ ನೀರು ಬಂದ್; ನೀರಾವರಿ ಇಲಾಖೆ ಪ್ರಕಟಣೆ

brp dam

ದಾವಣಗೆರೆ

ದಾವಣಗೆರೆ: ನ.22ರ ರಾತ್ರಿಯಿಂದ ಭದ್ರಾ ನಾಲೆಯ ನೀರು ಬಂದ್; ನೀರಾವರಿ ಇಲಾಖೆ ಪ್ರಕಟಣೆ

ದಾವಣಗೆರೆ: ನ.22ರ ರಾತ್ರಿಯಿಂದ ಭದ್ರಾ ನಾಲೆಯ ನೀರು ಬಂದ್ ಮಾಡಲಾಗುವುದು ಎಂದು ಭದ್ರಾ ಜಲಾಶಯದ ಅಚ್ಚುಕಟ್ಟು ರೈತರಿಗೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಹಾಗೂ ಅಧೀಕ್ಷಕ ಅಭಿಯಂತರು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳಲ್ಲಿ ನೀರನ್ನು ದಿನಾಂಕ:06.09.2023 ರಂದು ನಡೆದ 83ನೇ
ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಹರಿಸಲಾಗುತ್ತಿದೆ. ದಿ:15.09.2023 ಆದೇಶದಂತೆ ನೀರನ್ನು ದಿ:17.11.2023 ರಂದು ನಿಲ್ಲಿಸಬೇಕಾಗಿತ್ತು. ಆದರೆ, ನೀರು ನಿಲ್ಲಿಸುವ ದಿನಾಂಕವನ್ನು ದಿ:22.11.2023ಕ್ಕೆ ಮುಂದೂಡಲಾಗಿರುತ್ತದೆ.

ಭದ್ರಾ ಕಾಡಾ, ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ನಿರ್ದೇಶನದಂತೆ, 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಮುಂಗಾರು ಬೆಳೆಗಳಿಗೆ ಹರಿಸಲಾಗುತ್ತಿರುವ ನೀರನ್ನು ದಿ:22.11.2023 ರ ರಾತ್ರಿಯಿಂದ ಸ್ಥಗಿತಗೊಳಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತ ಬಾಂಧವರು ಮತ್ತು ಸಂಬಂಧಪಟ್ಟವರು ಸಹಕರಿಸಲು ಕೋರಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top