Connect with us

Dvgsuddi Kannada | online news portal | Kannada news online

ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ: ಆಡಳಿತ ಯಂತ್ರದ ದುರುಪಯೋಗ ; ಈಶ್ವರ್ ಖಂಡ್ರೆ

ಪ್ರಮುಖ ಸುದ್ದಿ

ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ: ಆಡಳಿತ ಯಂತ್ರದ ದುರುಪಯೋಗ ; ಈಶ್ವರ್ ಖಂಡ್ರೆ

ಡಿವಿಜಿ ಸುದ್ದಿ, ಬೆಂಗಳೂರು : ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ನೈತಿಕ ಮುನ್ನಡೆ ಅಲ್ಲ. ಇದು ಆಡಳಿತ ಯಂತ್ರದ ದುರುಪಯೋಗ ಎಂದು

ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

 ಉಪ ಚುನಾವಣೆಯ ಫಲಿತಾಂಶದ ಕುರಿತು ತಮ್ಮ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ಉಪ ಚುನಾವಣೆಯಲ್ಲಿ ಹಣಬಲ-ತೋಳ್ಬಲವನ್ನು ಉಪಯೋಗಿಸಲಾಗಿದೆ. ಜೊತೆಗೆ ಆಡಳಿತ ಯಂತ್ರದ ಸಂಪೂರ್ಣ ದುರುಪಯೋಗವಾಗಿದೆ. ನ್ಯಾಯ ಸಮ್ಮತ ಹಾಗೂ ಮುಕ್ತ ಚುನಾವಣೆ ನಡೆಯಲು ಅವಕಾಶವನ್ನೇ ನೀಡಲಿಲ್ಲ. ಹೀಗಾಗಿ ಇದು ನೈತಿಕ ಮುನ್ನಡೆ ಅಲ್ಲ ಎಂದರು.

ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆಯ ಫಲಿತಾಂಶ  ಕೆಲ ಹೊತ್ತಿನಲ್ಲಿ ಅಧಿಕೃತವಾಗಿ ಘೋಷಣೆ ಆಗಲಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತವಾಗಿದೆ. ಆದರೂ ಅಂತಿಮ ಫಲಿತಾಂಶ ಬರಬೇಕಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top