Connect with us

Dvgsuddi Kannada | online news portal | Kannada news online

ಅಬಕಾರಿ ಖಾತೆಯಲ್ಲಿ ನಾನು ಮಾಡೋ ಕೆಲಸ ಏನು ಇದೆ: ನೂತನ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ

ಪ್ರಮುಖ ಸುದ್ದಿ

ಅಬಕಾರಿ ಖಾತೆಯಲ್ಲಿ ನಾನು ಮಾಡೋ ಕೆಲಸ ಏನು ಇದೆ: ನೂತನ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ

ಬೆಂಗಳೂರು : ಸಿಎಂ ಬಿ.ಎಸ್.  ಯಡಿಯೂರಪ್ಪ ಅವರು ಖಾತೆ ಹಂಚಿಕೆ ಮಾಡಿದ ನಂತರ ಇದೀಗ ಖಾತೆ ಕ್ಯಾತೆ ಶುರುವಾಗಿದೆ.  ಇದೀಗ ಬಹಿರಂಗವಾಗಿಯೇ ನೂತನ ಸಚಿವರ ಅಸಮಾಧಾನ ಹೊರ ಹಾಕಿದ್ಧಾರೆ. ನೂತನ ಸಚಿವ ಎಂಟಿಬಿ ನಾಗರಾಜ್, ಅಬಕಾರಿ ಸಚಿನಾಗಿ ಮಾಡೋ ಕೆಲಸ ಏನಿದೆ.? ನಾನು ಸಿಎಂ ಯಡಿಯೂರಪ್ಪಗೆ ಅಬಕಾರಿ ಇಲಾಖೆ ಬೇಡ ಎಂದು ಹೇಳಿದ್ದೇನೆ ಎಂಬುದಾಗಿ ಹೇಳುವ ಮೂಲಕ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಸಿಎಂ ಯಡಿಯೂರಪ್ಪ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಅಬಕಾರಿ ಇಲಾಖೆ ಬೇಡ ಎಂದು ಸಿಎಂಗೆ ಹೇಳಿದ್ದೇನೆ. ಇದು ನಾನು ಕೆಲಸ ಮಾಡುವ ಖಾತೆ ಅಲ್ಲ. ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ.? ಬಡವರಿಗೆ ಸೈಟ್, ಮನೆ ಕೊಡುವ ಕೆಲಸ ಮಾಡಬಹುದು ಎಂಬುದಾಗಿ ಹೇಳುವ ಮೂಲಕ, ಪರೋಕ್ಷವಾಗಿ ವಸತಿ ಖಾತೆ ಬೇಕೆಂದು ಎಂಟಿಬಿ ನಾಗರಾಜ್ ಬೇಡಿಕೆ ಇಟ್ಟಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top