Connect with us

Dvgsuddi Kannada | online news portal | Kannada news online

ಸರಣಿ ಅಪಘಾತ; ಸ್ಥಳದಲ್ಲಿಯೇ ನಾಲ್ವರ ಸಾವು

ಪ್ರಮುಖ ಸುದ್ದಿ

ಸರಣಿ ಅಪಘಾತ; ಸ್ಥಳದಲ್ಲಿಯೇ ನಾಲ್ವರ ಸಾವು

ಬಾಗಲಕೋಟೆ : ಎರಡು ಬೈಕ್ ಗಳಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಬಳಿ ನಡೆದಿದೆ.

ಮೃತರನ್ನು ಹನುಮಂತ ಕಾಂಬಳೆ (38) ಅಮೋಘಿ ಡವಳೇಶ್ವರ (26) ಮಹದೇವ ಬಿದರಿ (26) ಮಹದೇವ ತಾಯಿ ಯಮನವ್ವ ಬಿದರಿ (58) ಎಂದು ಗುರುತಿಸಲಾಗಿದೆ. ಜಮಖಂಡಿಯಿಂದ ವಿಜಯಪುರಕ್ಕೆ ಹೊರಟಿದ್ದ ಕಾರು ಜಮಖಂಡಿ ವಿಜಯಪುರ ಮಾರ್ಗದಲ್ಲಿ ಒಂದು ಬೈಕ್ ಗೆ ಡಿಕ್ಕಿ ಹೊಡೆದು , ಮತ್ತೆ ಅದೇ ಮಾರ್ಗದಲ್ಲಿ ನೂರು ಮೀಟರ್ ದೂರದಲ್ಲಿ ಮತ್ತೊಂದು ಬೈಕ್ ಗೆ ಡಿಕ್ಕಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದು, ಘಟನೆ ನಡೆದ ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top