Connect with us

Dvgsuddi Kannada | online news portal | Kannada news online

ಕೆಎಸ್ ಆರ್ ಟಿಸಿ ಬಸ್ ಹರಿದು 21 ಕುರಿ ಸಹಿತ ಓರ್ವ ಕುರಿಗಾಹಿ ಸಾವು…!!

chitraduruga sheep death

ಪ್ರಮುಖ ಸುದ್ದಿ

ಕೆಎಸ್ ಆರ್ ಟಿಸಿ ಬಸ್ ಹರಿದು 21 ಕುರಿ ಸಹಿತ ಓರ್ವ ಕುರಿಗಾಹಿ ಸಾವು…!!

ಚಿತ್ರದುರ್ಗ:  ಕೆಎಸ್ ಆರ್ ಟಿಸಿ ಬಸ್ ವೊಂದು ಕುರಿಗಳ ಹಿಂಡು ಹಾಗೂ ಕುರಿಗಾಹಿ ಮೇಲೆ ಹರಿದ ಪರಿಣಾಮ, ಸ್ಥಳದಲ್ಲೇ ಕುರಿಗಾಹಿ ಹಾಗೂ 21 ಕುರಿಗಳು ಸಾವನ್ನಪ್ಪಿದ ದುರ್ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಈರಜ್ಜನಹಟ್ಟಿಯಲ್ಲಿ ಈ ದುರಂತ ಸಂಭವಿಸಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಕಡೆ ಕುರಿ ಮೇಯಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ನೆಲಗೇತನಹಟ್ಟಿಯ ಕುರಿಗಾಹಿ ರಾಜಪ್ಪ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮತ್ತೋರ್ವ ಕುರಿಗಾಹಿ ತಿಪ್ಪಣ್ಣ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುರಿ ಮೇಯಿಸಲು ನೇಲಗತಿನಹಟ್ಟಿ ಗ್ರಾಮದಿಂದ ಚನ್ನಗಿರಿಗೆ ತೆರಳಿದ್ದರು.

ಮಳೆ ಬಂದ ಕಾರಣ ಬಸ್ ಕುರಿ ಮೇಲೆ ಹರಿದಿದೆ. ಇದರ ಪರಿಣಾಮ 2 ಲಕ್ಷಕ್ಕೂ ಹೆಚ್ಚು ಮೌಲ್ಯದ 21 ಕುರಿಗಳ ಸಾವನ್ನಪ್ಪಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top