ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಅಸುನೀಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಿರಾಫನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿರಾಫನಹಳ್ಳಿಯ ಆದಿತ್ಯ (15), ಅಪ್ಪರಸನಹಳ್ಳಿ ಗ್ರಾಮದ ಯರಗುಂಟೇಶ್ವರ (14) ಮೃತರು. ಬೇಸಗೆ ಬಿಸಿಲಿನಿಂದ ಪಾರಾಗಲು ಜಮೀನಿನಲ್ಲಿರುವ ಕೃಷಿ ಹೊಂಡಕ್ಕೆ ತೆರಳಿ ಈಜಲು ಇಳಿದಿದ್ದರು. ಕೃಷಿ ಹೊಂಡದ ಒಳಭಾಗದಲ್ಲಿ
ಪ್ಲಾಸ್ಟಿಕ್ ತಾಡಪಾಲು ಹಾಕಿರುವುದರಿಂದ ಪಾಚಿಕಟ್ಟಿದ್ದು, ಕಾಲು ಜಾರಿ ದಡ ಸೇರಲು ಸಾಧ್ಯವಾಗದೇ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ರೈತರು ಅಡಿಕೆ ತೋಟ ಉಳಿಸಿಕೊಳ್ಳಲು ರೈತರು ಕೃತಕ ಕೃಷಿ ಹೊಂಡ ನಿರ್ಮಿಸಿ ಅದಕ್ಕೆ ಟ್ಯಾಂಕರ್ ಇಲ್ಲವೇ ಕೊಳವೆ ಬಾವಿ ಮೂಲಕ ನೀರು ಭರ್ತಿ ಮಾಡಿ ನಂತರ ತೋಟಕ್ಕೆ ಹಾಯಿಸಲಾಗುತ್ತಿದೆ. ಈ ಬಗ್ಗೆ ಚಿತ್ರಹಳ್ಳಿ ಠಾಣೆ ಪ್ರಕರಣ ದಾಖಲಾಗಿದೆ.



