Connect with us

Dvgsuddi Kannada | online news portal | Kannada news online

ಅಡಿಕೆ ತೋಟಕ್ಕೆ ನೀರು ಹಾಯಿಸಲು ನಿರ್ಮಿಸಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು…!!!

ಪ್ರಮುಖ ಸುದ್ದಿ

ಅಡಿಕೆ ತೋಟಕ್ಕೆ ನೀರು ಹಾಯಿಸಲು ನಿರ್ಮಿಸಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು…!!!

ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಅಸುನೀಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಿರಾಫನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿರಾಫನಹಳ್ಳಿಯ ಆದಿತ್ಯ (15), ಅಪ್ಪರಸನಹಳ್ಳಿ ಗ್ರಾಮದ ಯರಗುಂಟೇಶ್ವರ (14) ಮೃತರು. ಬೇಸಗೆ ಬಿಸಿಲಿನಿಂದ ಪಾರಾಗಲು ಜಮೀನಿನಲ್ಲಿರುವ ಕೃಷಿ ಹೊಂಡಕ್ಕೆ ತೆರಳಿ ಈಜಲು ಇಳಿದಿದ್ದರು. ಕೃಷಿ ಹೊಂಡದ ಒಳಭಾಗದಲ್ಲಿ
ಪ್ಲಾಸ್ಟಿಕ್ ‌ತಾಡಪಾಲು ಹಾಕಿರುವುದರಿಂದ ಪಾಚಿಕಟ್ಟಿದ್ದು, ಕಾಲು ಜಾರಿ ದಡ ಸೇರಲು ಸಾಧ್ಯವಾಗದೇ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ರೈತರು ಅಡಿಕೆ ತೋಟ ಉಳಿಸಿಕೊಳ್ಳಲು ರೈತರು ಕೃತಕ ಕೃಷಿ ಹೊಂಡ ನಿರ್ಮಿಸಿ ಅದಕ್ಕೆ ಟ್ಯಾಂಕರ್‌ ಇಲ್ಲವೇ ಕೊಳವೆ ಬಾವಿ ಮೂಲಕ ನೀರು ಭರ್ತಿ ಮಾಡಿ ನಂತರ ತೋಟಕ್ಕೆ ಹಾಯಿಸಲಾಗುತ್ತಿದೆ. ಈ ಬಗ್ಗೆ ಚಿತ್ರಹಳ್ಳಿ ಠಾಣೆ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top