Connect with us

Dvgsuddi Kannada | online news portal | Kannada news online

ಕೋಟೆ ನಾಡಿಗೆ ವೈದ್ಯಕೀಯ ಕಾಲೇಜ್ ; ಸಚಿವರಿಂದ ಸ್ಥಳ ಪರಿಶೀಲನೆ

ಪ್ರಮುಖ ಸುದ್ದಿ

ಕೋಟೆ ನಾಡಿಗೆ ವೈದ್ಯಕೀಯ ಕಾಲೇಜ್ ; ಸಚಿವರಿಂದ ಸ್ಥಳ ಪರಿಶೀಲನೆ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ಮಾಣಕ್ಕೆ ಭೂಮಿ ಗುರುತಿಸಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗಿ 30 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೀಪಾವಳಿ ಹಬ್ಬದ ಉಡುಗೊರೆಯಾಗಿ ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಘೋಷಣೆ ಮಾಡಿ 50 ಕೋಟಿ ರೂ. ಅನುದಾನ ನೀಡಿದ್ದಾರೆ.

ಈ  ವರ್ಷದಲ್ಲಿ ಇನ್ನೂ ಎರಡು ಹೊಸ ವೈದ್ಯಕೀಯ ಕಾಲೇಜುಗಳ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ಹಾಗೂ ಹಾವೇರಿಯಲ್ಲಿ ಕಾಲೇಜುಗಳ ಕಟ್ಟಡ ಶಂಕುಸ್ಥಾಪನೆ ನೆರವೇರಿದೆ. ಡಿಸೆಂಬರ್ ಒಳಗೆ ಚಿಕ್ಕಮಗಳೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಚಿತ್ರದುರ್ಗದಲ್ಲಿ 20 ಎಕರೆಗೂ ಹೆಚ್ಚು ವಿಸ್ತೀರ್ಣದ ಭೂಮಿಯಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಕೆಲ ಹಳೆ ಕಟ್ಟಡಗಳಿದ್ದು, ಅದನ್ನು ಕೂಡ ತೆರವು ಮಾಡಬಹುದು. ಶೀಘ್ರ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ, 30 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ. ನರ್ಸಿಂಗ್, ಅರೆವೈದ್ಯಕೀಯ, ಲ್ಯಾಬ್ ಮೊದಲಾದ ಕೋರ್ಸುಗಳನ್ನು ಇಲ್ಲೇ ಆರಂಭಿಸಲಾಗುವುದು. ಎಲ್ಲ ವೈದ್ಯಕೀಯ ಕಾಲೇಜಿಗೆ ಹೊಂದಿಕೊಂಡ ಆಸ್ಪತ್ರೆಯಲ್ಲಿ 700 ಹಾಸಿಗೆ ಇರುವಂತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು. ಗೃಹಸಚಿವ ಬಸವರಾಜ ಬೊಮ್ಮಾಯಿ, ಸಂಸದ ಎ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top