ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಅಧಿಕಾರ ಸ್ವೀಕಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಚಿತ್ರದುರ್ಗ: ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಎಂ ಅವರು ಅಧಿಕಾರ ಸ್ವೀಕರಿಸಿದರು. ಹೈಕೋರ್ಟ್ ವಿಭಾಗೀಯ ಪೀಠದ ನಿರ್ದೇಶನದ ಮೇರೆಗೆ ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ನ್ಯಾಯಾಧೀಶರ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅಧಿಕಾರ ಅಧಿಕಾರ ಸ್ವೀಕರಿಸಿದರು.

ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಠದ ಆಡಳಿತ ನಿರ್ವಹಣೆಯ ಉದ್ದೇಶದಿಂದ ಮಾಜಿ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು.‌ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿದ ಹೈಕೋರ್ಟ್, ಮಧ್ಯಂತರ ವ್ಯವಸ್ಥೆ ಮಾಡಿಕೊಳ್ಳಲು ಮಠದ ಭಕ್ತರಿಗೆ ಆರು ವಾರಗಳ ಕಾಲಾವಕಾಶ ನೀಡಿತ್ತು.

ಆಡಳಿತಾಧಿಕಾರಿ ನೇಮಕಾತಿ ರದ್ದುಪಡಿಸಿದ ಆದೇಶ ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ, ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *