ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ವಿಮೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನಾಯಕನಹಟ್ಟಿ: ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಗುರುತಿಪ್ಪೇರುದ್ರಸ್ವಾಮಿಯ ರಥಕ್ಕೆ 2.50 ಕೋಟಿ ವಿಮೆಯನ್ನು ನ್ಯೂ ಇಂಡಿಯ ಅಶ್ಯುರೆನ್ಸ್ ಕಂಪನಿ ಒದಗಿಸಿದೆ. ರಥವನ್ನು ಬೆಲೆಬಾಳುವ ಮರದಿಂದ ನಿರ್ಮಿಸಲಾಗಿದ್ದು, ನೈಸರ್ಗಿಕ ಅವಘಡ ಸಂಭವಿಸಿದರೆ ಮುನ್ನೆಚ್ಚರಿಕೆ ಕ್ರಮವಾಗಿ ವಿಮೆಯನ್ನು ಒದಗಿಸಲಾಗಿದೆ.

ಈ ಬಗ್ಗೆ ಚಿತ್ರದುರ್ಗದ ನ್ಯೂ ಇಂಡಿಯ ಅಶ್ಯುರೆನ್ಸ್ ಕಂಪನಿಯ ವ್ಯವಸ್ಥಾಪಕ ಎ.ಎಂ.ಶರಣಯ್ಯ ಮಾಹಿತಿ ನೀಡಿದ್ದು, ಸತತ ನಾಲ್ಕು ವರ್ಷದಿಂದ ರಥಕ್ಕೆ ವಿಮೆ ನೀಡಲಾಗುತ್ತಿದೆ. ಆದರೆ, ಈ ವರ್ಷ ಮಳೆ, ಗಾಳಿ, ಬೆಂಕಿ ಸೇರಿದಂತೆ ನೈಸರ್ಗಿಕ ಹಾನಿಗಳಿಂದ ಸಂಭವಿಸಬಹುದಾದ ಅವಘಡಗಳಿಗೆ ವಿಮೆ ನೀಡಲಾಗಿದೆ. ಜತೆಗೆ ಜಾತ್ರೆಗಾಗಿ ರಥವನ್ನು ಕಟ್ಟುವ, ಜಾತ್ರೆಯ ದಿನದಂದು ರಥವನ್ನು ಚಲಾಯಿಸುವ ಸಾಂಪ್ರದಾಯಿಕ ಕುಲಕಸುಬುಗಳ ಒಟ್ಟು 85 ಜನರಿಗೆ 2 ಲಕ್ಷ ಮತ್ತು ರಥೋತ್ಸವದಲ್ಲಿ ಭಾಗವಹಿಸುವ 25 ಜನ ಅನಾಮಿಕ ಭಕ್ತರಿಗೆ ತಲಾ 1 ಲಕ್ಷ ವಿಮೆ ಒದಗಿಸಲಾಗುವುದು. ವಿಮೆ ಸೌಲಭ್ಯ ನೀಡಲು ದೇವಾಲಯದಿಂದ 52,364 ರೂಪಾಯಿಯನ್ನು ಕಂಪನಿ ಪಡೆದುಕೊಂಡಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *