Connect with us

Dvgsuddi Kannada | online news portal | Kannada news online

ಕಳುವಾಗಿದ್ದ 2 ಕೋಟಿ ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ವಾಪಸ್ ನೀಡಿದ ಚಿತ್ರದುರ್ಗ ಪೊಲೀಸ್

chitrduruga police

ಕ್ರೈಂ ಸುದ್ದಿ

ಕಳುವಾಗಿದ್ದ 2 ಕೋಟಿ ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ವಾಪಸ್ ನೀಡಿದ ಚಿತ್ರದುರ್ಗ ಪೊಲೀಸ್

ಚಿತ್ರದುರ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದ ಚಿತ್ರದುರ್ಗ ಪೊಲೀಸರು,  ನ್ಯಾಯಾಲಯದ ಅನುಮತಿ ಮೇರೆಗೆ ವಾರಸುದಾರರಿಗೆ ವಾಪಾಸ್ ನೀಡಿದರು.

ಕಳೆದ 2020ರ ನವೆಂಬರ್ ನಿಂದ  2021ರ ನವೆಂಬರ್ ವರೆಗಿನ ಒಂದು ವರ್ಷದಲ್ಲಿ ದಾಖಲಾಗಿದ್ದ 65 ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಸುಮಾರು 2 ಕೋಟಿಗೂ ರೂ. ಹೆಚ್ಚು ಮೌಲ್ಯದ ವಿವಿಧ ವಸ್ತುಗಳನ್ನು ವಾರಸುದಾರರಿಗೆ ನೀಡಲಾಯಿತು.

ಚಿತ್ರದುರ್ಗ ಎಸ್​ಪಿ ಜಿ ರಾಧಿಕಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 54 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, 1.39 ಕೋಟಿ ಮೌಲ್ಯದ ಅಡಿಕೆ ಹಾಗೂ ಶ್ರೀಗಂಧ, 3.81 ಲಕ್ಷ ನಗದು, 14.31ಲಕ್ಷ ಮೌಲ್ಯದ ಒಟ್ಟು 22 ದ್ವಿಚಕ್ರ ವಾಹನ, ಎರಡು ಎತ್ತುಗಳು ಸೇರಿ ವಿವಿಧ ವಸ್ತುಗಳನ್ನು ವಾರಸುದಾರರಿಗೆ ವಾಪಸ್ ನೀಡಲಾಯಿತು.

ಚಿತ್ರದುರ್ಗ ಡಿವೈಎಸ್​ಪಿ ಪಾಂಡುರಂಗ, ಹಿರಿಯೂರು ಡಿವೈಎಸ್​ಪಿ ರೋಷನ್ ಜಮೀರ್, ಚಳ್ಳಕೆರೆ ಡಿವೈಎಸ್​ಪಿ ಶ್ರೀಧರ್ ಸೇರಿ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top