Connect with us

Dvgsuddi Kannada | online news portal | Kannada news online

ವೀರಶೈವ ಲಿಂಗಾಯತರನ್ನು ಓಬಿಸಿಗೆ ಸೇರಿಸಿ: ಮುರುಘಾ ಶ್ರೀ

ಪ್ರಮುಖ ಸುದ್ದಿ

ವೀರಶೈವ ಲಿಂಗಾಯತರನ್ನು ಓಬಿಸಿಗೆ ಸೇರಿಸಿ: ಮುರುಘಾ ಶ್ರೀ

ಚಿತ್ರದುರ್ಗ : ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸಬೇಕು ಎಂದು  ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವೀರಶೈವ ಲಿಂಗಾಯತದಲ್ಲಿ 80ಕ್ಕೂ ಹೆಚ್ಚು ಉಪಪಂಗಡಗಳಿದ್ದು,  ಕಡು ಬಡವರು, ಹಿಂದುಳಿದವರು ಸಹ ವೀರಶೈವ ಲಿಂಗಾಯತ ಸಮಾಜದಲ್ಲಿದ್ದಾರೆ. ಆದ್ದರಿಂದ ಒಳ ಮೀಸಲಾತಿ ಜತೆಗೆ ಓಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮನವಿ ಮಾಡಿದರು.

ವೀರಶೈವ ಲಿಂಗಾಯತ ಪರಿಕಲ್ಪನೆಯಡಿಯ ಒಳ ಪಂಗಡಗಳು ಸಾಕಷ್ಟು ಶೋಷಣೆ ಅನುಭವಿಸುತ್ತಿವೆ. ಈ ಸಮುದಾಯದಲ್ಲೂ ತುಂಬಾ ಜನ ತುಳಿತಕ್ಕೆ ಒಳಗಾಗಿದ್ದಾರೆ. ಅಂತವರನ್ನು ಗುರುತಿಸಿ ಬೆಳಕಿಗೆ ತರಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಗಮನಹರಿಸಿ ನ್ಯಾಯ ಕಲ್ಪಿಸಬೇಕಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top