Connect with us

Dvgsuddi Kannada | online news portal | Kannada news online

ಸ್ರೀಶಕ್ತಿ ಸಂಘಕ್ಕೆ 1.5 ಲಕ್ಷ ಸಾಲ: ಕುರಿಗಾಹಿ ಸಂಘಕ್ಕೆ 20 ಕುರಿ: ಸಿಎಂ ಬಸವರಾಜ ಬೊಮ್ಮಾಯಿ

ಪ್ರಮುಖ ಸುದ್ದಿ

ಸ್ರೀಶಕ್ತಿ ಸಂಘಕ್ಕೆ 1.5 ಲಕ್ಷ ಸಾಲ: ಕುರಿಗಾಹಿ ಸಂಘಕ್ಕೆ 20 ಕುರಿ: ಸಿಎಂ ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರು: ಸರ್ಕಾರ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 33 ಸಾವಿರ ಸ್ತ್ರೀಶಕ್ತಿ ಸಂಘಗಳಿಗೆ 1.5 ಲಕ್ಷ ರೂ. ಸಾಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿ.ಟಿ.ಪಾಟೀಲ ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ‌ ನೀಡಿ ಮಾತನಾಡಿದ ಅವರು, ಸ್ತ್ರೀಶಕ್ತಿ ಸಂಘಗಳ ಬಲವರ್ಧನೆ, ಸ್ತ್ರೀಯರ ಆರ್ಥಿಕ ಸ್ವಾವಲಂಬನೆ ಮಾಡುವ ಗುರಿ ಹೊಂದಲಾಗಿದೆ.ರಾಜ್ಯದಲ್ಲಿನ ಭೂರಹಿತ ಕೃಷಿ ಕಾರ್ಮಿಕ ಮಕ್ಕಳಿಗೂ ರೈತ ನಿಧಿಯೋಜನೆಯಂತೆ ವಿದ್ಯಾನಿಧಿ ಜಾರಿಗೆ ತರಲಾಗುವುದು. ಕುಶಲ ಕಾರ್ಮಿಕರಿಗೆ 50 ಸಾವಿರ ರೂ. ಸಹಾಯಧನ ನೀಡಲಾಗುವುದು. ಕುರಿಗಾರರಿಗೆ ವಿಶೇಷ ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯಡಿ ಪ್ರತಿ ಸಂಘಕ್ಕೆ 20 ಕುರಿ, 1 ಟಗರು ನೀಡಲಾಗುವುದು ಎಂದರು.

ಜಗಜೀವನ್‌ ರಾಮ್‌ ಅವರ ಹೆಸರಿನಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸುವ ಚಿಂತನೆ ಹಾಗೂ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವಕರ ಸ್ವಾವಲಂಬನೆ ಜೀವನಕ್ಕಾಗಿ 10 ಲಕ್ಷ ರೂ. ವರೆಗೆ ಸಹಾಯಧನ ನೀಡುವ ಯೋಜನೆಯಿದೆ. ರಾಜ್ಯದಲ್ಲಿ 8 ಸಾವಿರ ಶಾಲೆಗಳ ಹಾಗೂ 3 ಸಾವಿರ ಅಂಗನವಾಡಿ ಕೊಠಡಿಗಳನ್ನು ನಿರ್ಮಿಸುವ ಯೋಜನೆಯ ಗುರಿ ಹೊಂದಲಾಗಿದೆ. ಉತ್ತರ ಕರ್ನಾಟಕದ ಹೆಬ್ಟಾಗಿಲೆಂದೇ ಹೆಸರಾಗಿರುವ ರಾಣಿಬೆನ್ನೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ  ಹೆಬ್ಟಾಗಿಲು ನಿರ್ಮಿಸಲಾಗುವುದು ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top