Connect with us

Dvgsuddi Kannada | online news portal | Kannada news online

79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ; ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಅನೇಕ ಗಣ್ಯರ ಶುಭಾಶಯ

ಪ್ರಮುಖ ಸುದ್ದಿ

79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ; ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಅನೇಕ ಗಣ್ಯರ ಶುಭಾಶಯ

ಬೆಂಗಳೂರು: 79ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ  ಗಣ್ಯರು ಶುಭಾಶಯ ಕೋರಿದ್ದಾರೆ. ಬಿಎಸ್​ವೈ ಹೆಸರಿನಲ್ಲಿರ ಅಭಿಮಾನಿಗಳು ಪೂಜೆ, ಹೋಮ ಮಾಡಿಸಿ ನೆಚ್ಚಿನ ನಾಯಕ ಆಯಸ್ಸು ವೃದ್ಧಿಸಲೆಂದು ಪ್ರಾರ್ಥಿಸುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಗಣ್ಯರು ಬಿಎಸ್​ವೈಗೆ ಶುಭ ಕೋರಿದ್ದಾರೆ.

ಯಡಿಯೂರಪ್ಪ ಅವರು ಅನುಭವಿ ಆಡಳಿತಗಾರ. ಬಡವರ, ರೈತರ ಪಾಲಿನ ಆಶಾಕಿರಣ ಬಿಎಸ್​ವೈ. ದೇವರು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

bsy birth day 3

 

ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನ’ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಶುಭಕೋರಿದ್ದಾರೆ.

ಕುಟುಂಬಸ್ಥರು ಸಿಎಂಗೆ ಆರತಿ ಬೆಳಗಿ ಆಶೀರ್ವಾದ ಪಡೆಯುವ ಮೂಲಕ ಹುಟ್ಟುಹಬ್ಬದ ಶುಭ ಕೋರಿದರು. ಕಾವೇರಿ ನಿವಾಸಕ್ಕೆ ಬೆಳಗ್ಗೆಯೇ ಆಗಮಿಸಿದ ನಳೀನ್ ಕುಮಾರ್ ಕಟೀಲ್, ಆರ್.ಅಶೋಕ್, ಉಮೇಶ್ ಕತ್ತಿ, ಪಿ.ಸಿ. ಮೋಹನ್, ನಟ ಜಗ್ಗೇಶ್, ಹೊಳಲ್ಕೆರೆ ಶಾಸಕ ಚಂದ್ರಪ್ಪ, ಈರಣ್ಣ ಕಡಾಡಿ, ರಾಜ್ಯ ಬಿಜೆಪಿ ರೈತ ಮೋರ್ಚಾ ನಿಯೋಗ ಹಾಗೂ ಶಾಸಕರು ತಮ್ಮ ನಾಯಕನಿಗೆ ಜನ್ಮದಿನ ಶುಭಾಶಯ ತಿಳಿಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top