ಡಿವಿಜಿ ಸುದ್ದಿ, ಶಿವಮೊಗ್ಗ: ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ನೆರೆ ಹಾವಳಿ ಪ್ರದೇಶಗಳಿಗೆ ಅ.21 ರಂದು ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ಮೈಮಾನಿಕ ಸಮೀಕ್ಷೆ ನಂತರ ಪ್ರಧಾನಿ ಅವರಿಗೆ ಹಾನಿಯ ವಾಸ್ತವ ಸ್ಥಿತಿಗತಿ ಮನವರಿಕೆ ಮಾಡಲಾಗುವುದು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕದ ಜನರ ಸಂಕಷ್ಟಗಳಿಗೆ ಸ್ಪಂದಿಸುವರು. ಹೆಚ್ವಿನ ನೆರವು ನೀಡುವ ಭರವಸೆ ಇದೆ ಎಂದರು.



