ಡಿವಿಜಿ ಸುದ್ದಿ, ಬೆಂಗಳೂರು: ಈ ಬಾರಿಯ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟವನ್ನು ಬ್ಯಾನ್ ಮಾಡುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಕೊರೊನಾ ವೈರಸ್ ಹಿನ್ನೆಲೆ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಹಚ್ಚುವುದನ್ನು ನಿಷೇಧಿಸಬೇಕು ಎಂದು ಸರ್ಕಾರ ಪರಿಸರವಾದಿಗಳು ಸಲಹೆ ನೀಡಿದ್ದರು. ಪಟಾಕಿ ಮಾರಾಟದಿಂದ ಅಂಗಡಿಗಳಲ್ಲಿ ಜನರು ಗುಂಪು ಗುಂಪಾಗಿ ಸೇರುವುದರಿಂದ ಕೊರೊನ ಸೋಂಕು ಹೆಚ್ಚಳವಾಗು ಸಾಧ್ಯತೆ ಇದೆ ಎಂದು ತಜ್ಞರು ಸಲಹೆ ನೀಡಿದ್ದರು. ಹೀಗಾಗಿ ಪಟಾಕಿ ಮಾರಾಟ ಮತ್ತು ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ.
ಇದೀಗ ಬೆಂಗಳೂರುರಲ್ಲಿ ಸಿಎಂ ಯಡಿಯೂರಪ್ಪ ಪಾಟಕಿ ಮಾರಾಟಕ್ಕೆ ನಿಷೇಧಿಸಿರುವುದಾಗಿ ಘೋಷಿಸಿದ್ದಾರೆ. ಇನ್ನಷ್ಟೇ ಅಧಿಕೃತ ಆದೇಶ ಹೊರಡಿಸಬೇಕಿದೆ.



