ಡಿವಿಜಿ ಸುದ್ದಿ, ಬಳ್ಳಾರಿ: ಬಹಳ ದಿನದ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಉಳಿಯಲ್ಲ ಎನ್ನುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಲು ಬಿ.ಎಸ್. ಯಡಿಯೂರಪ್ಪ ನಿರಾಕರಿಸಿದರು.
ಪ್ರವಾಹಕ್ಕೆ ತತ್ತರಿಸಿ ಹೋಗಿರುವ ಉತ್ತರ ಕರ್ನಾಟಕ ಜಿಲ್ಲೆಗಳ ವೈಮಾನಿಕ ಸಮೀಕ್ಷೆಗೆ ತೆರಳುವ ಮುನ್ನ ಜಿಂದಾಲ್ನ ಏರ್ ಸ್ಟ್ರಿಪ್ ನಲ್ಲಿ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಇಂದು ಕಲಬುರ್ಗಿ, ವಿಜಯಪುರ, ಯಾದಗಿರಿಗೆ ವೈಮಾನಿಕ ಸಮೀಕ್ಷೆಗೆ ಹೋಗುತ್ತಿದ್ದೇನೆ. ನಂತರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪ್ರವಾಹ, ಬೆಳೆ ಹಾನಿ ಬಗ್ಗೆ ಮಾಹಿತಿ ಪಡೆದು ಪರಿಹಾರ ಕೊಡಲಾಗುವುದು. ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಲಾಗಿದೆ. ಮಳೆ ನಷ್ಟದ ಕುರಿತು ಪ್ರಧಾನಮಂತ್ರಿಯ ಗಮನ ಸೆಳೆಯಲಾಗಿದೆ ಎಂದರು.



