Connect with us

Dvgsuddi Kannada | online news portal | Kannada news online

 ಕೊರೊನಾ ಭೀತಿ: ಸವದತ್ತಿ ಯಲ್ಲಮ್ಮ ದೇವಸ್ಥಾನ ಸೇರಿ ಮೂರು ದೇವಾಲಯ ಮತ್ತೆ ಒಂದು ತಿಂಗಳು ಬಂದ್

ಪ್ರಮುಖ ಸುದ್ದಿ

 ಕೊರೊನಾ ಭೀತಿ: ಸವದತ್ತಿ ಯಲ್ಲಮ್ಮ ದೇವಸ್ಥಾನ ಸೇರಿ ಮೂರು ದೇವಾಲಯ ಮತ್ತೆ ಒಂದು ತಿಂಗಳು ಬಂದ್

ಡಿವಿಜಿ ಸುದ್ದಿ, ಬೆಳಗಾವಿ: ಕೊರೊನಾ ಭೀತಿ ಹಿನ್ನೆಲೆ ಜಿಲ್ಲೆಯ  ಪ್ರಸಿದ್ಧ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು  ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳನ್ನು ಮತ್ತೊಂದು ತಿಂಗಳು ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.

ನ.30ರವರೆಗೆ ಸಾರ್ವಜನಿಕ ದರ್ಶನ ನಿಷೇಧಿಸಿಗೊಳಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ನೆರೆಯ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನು ತಡೆಯಲು, ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿವಿಧಾನಗಳನ್ನು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ನಡೆಸಲು ಷರತ್ತಿಗೆ ಒಳಪಟ್ಟು ವಿನಾಯಿತಿ ನೀಡಲಾಗಿದೆ ಎಂದು  ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಮಾಹಿತಿ ನೀಡಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top