Connect with us

Dvgsuddi Kannada | online news portal | Kannada news online

ದಸರಾ ನಂತರ ಮೈಸೂರಲ್ಲಿ ಕೊರೊನಾ ಕೇಸ್ ಹೆಚ್ಚುವ ಸಾಧ್ಯತೆ

ಪ್ರಮುಖ ಸುದ್ದಿ

ದಸರಾ ನಂತರ ಮೈಸೂರಲ್ಲಿ ಕೊರೊನಾ ಕೇಸ್ ಹೆಚ್ಚುವ ಸಾಧ್ಯತೆ

 ಡಿವಿಜಿ ಸುದ್ದಿ, ಮೈಸೂರು: ದಸರಾ ಸರಳ ಆಚರಣೆಯ ನಂತರವೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾಗೆ ಪ್ರವಾಸಿತಾಣಗಳನ್ನು ಓಪನ್ ಮಾಡಿರುವ ಪರಿಣಾಮ  ಕೊರೊನಾ ಕೇಸ್ ಗಳು ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ  ನಾವು  ಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ಎಂದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಇನ್ನು 15 ದಿನದ ನಂತರ ನಾವು ಮತ್ತಷ್ಟು ಹೆಚ್ಚಿನ ಪ್ರಕರಣಗಳು ನಿರೀಕ್ಷಿಸಿದ್ದೇವೆ. ಆದ್ದರಿಂದ ಜನರು ಮಾಸ್ಕ್ ಹಾಗೂ ಸಾಮಾಜಿಕ ಅಂತರದ ನಿಯಮಗಳನ್ನು ಪಾಲನೆ ಮಾಡಬೇಕಿದೆ ಎಂದು ಮನವಿ ಮಾಡಿದರು.

ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯೊಂದಿಗೆ ಜಿಲ್ಲಾಡಳಿತ ವ್ಯವಸ್ಥಿತವಾಗಿ ಸಿದ್ಧತೆ ನಡೆಸಲಾಗಿತ್ತು. ಈಗ ಯಾವುದೇ ಬೆಡ್ ಸಮಸ್ಯೆ ಇಲ್ಲ. ಆಕ್ಸಿಜನ್ ಹಾಗೂ ಟೆಸ್ಟಿಂಗ್ ನಲ್ಲೂ ಯಾವುದೇ ಕೊರತೆ ಇಲ್ಲ. ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ 50 ಬೆಡ್, ಆಕ್ಸಿಜನ್ ಬೆಡ್, ಐಸಿಯುಗಳು ಲಭ್ಯವಿದೆ ಎಂದು ಹೇಳಿದರು.

ಮೊದಲು ಕೊರೊನಾವನ್ನು ಜಿಲ್ಲೆಯಲ್ಲಿ ಉತ್ತಮವಾಗಿ ನಿರ್ವಹಣೆ ಮಾಡಿದ್ದರು. ಆದರೆ ಆ ಬಳಿಕ ಕೆಲ ಕಾರಣಗಳಿಂದ ಸೋಂಕು ಹೆಚ್ಚಾಗಿತ್ತು. ಈಗ ನಾವು ಮತ್ತೆ ಎಲ್ಲವನ್ನು ಹಿಡಿತಕ್ಕೆ ತಂದಿದ್ದೇವೆ. ಈಗ ದಸರಾ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಮುಂದಿನ 10 ಮತ್ತು 20 ದಿನಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚುವ ಸಾಧ್ಯತೆ ಇದೆ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});