ನೈಟ್ ಕರ್ಫ್ಯೂ 10ರ ಬದಲು 11.30ರಿಂದ ಜಾರಿಗೊಳಿಸಿ; ಸಿಎಂಗೆ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಬ್ರಿಟನ್​ನಲ್ಲಿ ಅತ್ಯಂತ ವೇಗವಾಗಿ ಹರಡುವ ಹೊಸ ಸ್ವರೂಪದ ಕೊರೊನಾ ವೈರಸ್​ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಈ ಕರ್ಫ್ಯೂ ಜಾರಿ ಇರಲಿದೆ. ಹೊಸ ವರ್ಷದ ಸಂಭ್ರಮದಲ್ಲಿರುವ ಈ ಸಮಯದಲ್ಲಿ ಈ ನೈಟ್​ ಕರ್ಫ್ಯೂ ಅನೇಕ ಉದ್ಯಮಗಳಿಗೆ ಪೆಟ್ಟು ನೀಡಲಿದೆ. ಅದರಲ್ಲಿ ಮುಖ್ಯವಾಗಿ ಬಾರ್​ ಅಂಡ್​ ರೆಸ್ಟೋರೆಂಟ್​ ಉದ್ದಿಮೆಗೆ ಈ ಕರ್ಫ್ಯೂ ಭಾರೀ ಪೆಟ್ಟು ನೀಡಲಿದೆ. ಈ ಹಿನ್ನಲೆ ರಾತ್ರಿ 10ರ ಬದಲು 11. 30ರಿಂದ ಬೆಳಿಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿ ಮಾಡುವಂತೆ ಬಾರ್​ ಅಂಡ್​ ರೆಸ್ಟೋರೆಂಟ್ ಮಾಲೀಕರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕಳೆದ 10 ದಿನಗಳಲ್ಲಿ ಬ್ರಿಟನ್​ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಾಜ್ಯಕ್ಕೆ ಆಗಮಿಸಿದ್ದು,ಈ ಹಿನ್ನೆಲೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಬ್ರಿಟನ್​ನಿಂದ ಆಗಮಿಸಿರುವವರ ಪತ್ತೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಇದರ ಜೊತೆಗೆ ಇಂದಿನಿಂದ ಡಿ. 2ರವರೆಗೆ ನೈಟ್​ ಕರ್ಫ್ಯೂ ಜಾರಿಗೆ ಸರ್ಕಾರ ನಿರ್ಧರಿಸಿದೆ. ಕ್ರಿಸ್​ಮಸ್​ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬಾರ್​ ಮತ್ತು ರೆಸ್ಟೋರೆಂಟ್​ಗಳಿಗೆ ಉತ್ತಮ ವ್ಯಾಪಾರವಾಗುತ್ತದೆ. ವರ್ಷಾಂತ್ಯದಲ್ಲಿ ತಡರಾತ್ರಿವರೆಗೈ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ. ಈ ಹಿನ್ನಲೆ ಒಂದೂವರೆ ಗಂಟೆ ತಡವಾಗಿ ನಿಷೇಧಾಜ್ಞೆ ವಿಧಿಸುವಂತೆ ಮನವಿ ಮಾಡಲಾಗಿದೆ.

ಅಷ್ಟೇ ಅಲ್ಲದೇ , ಬಾರ್​ಗಳ ಲೈಸೆನ್ಸ್​ ಪುನರ್​ನವೀಕರಣದ ಶುಲ್ಕವನ್ನು ಕಟ್ಟುವ ಸಮಯ ಇದಾಗಿದೆ. ಈ ಸಮಯದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾದರೆ, ಕಷ್ಟವಾಗಲಿದೆ. ಅನೇಕರು ಸಾಲ ಮಾಡಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತಂದು ವಹಿವಾಟು ಮಾಡುತ್ತಿದ್ದಾರೆ. ಹಾಗಾಗಿ ಹಾಗಾಗಿ ಕನಿಷ್ಠ 11.30ರವರಗೆ ಸಮಯ ಸಿಕ್ಕರೆ ಸ್ವಲ್ಪಮಟ್ಟಿಗೆ ವ್ಯಾಪಾರ ಉತ್ತಮವಾಗಬಹುದು. ಈ ಹಿನ್ನಲೆ ಈ ಸಮಯವನ್ನು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿಯೂ ರಾತ್ರಿ 11 ಗಂಟೆಯಿಂದ ನೈಟ್​ ಕರ್ಫ್ಯೂ ಜಾರಿ ಮಾಡಲಾಗಿದೆ. ಹೀಗಾಗಿ ಒಂದೂವರೆ ಗಂಟೆ ವಿಳಂಬವಾಗಿ ನಿಷೇಧಾಜ್ಞೆ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *