ಬೆಂಗಳೂರು : ಬ್ರಿಟನ್ ವೈರಸ್ ಹೆಚ್ಚಳ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿದೇಶದಿಂದ ಬಂದಂತವರನ್ನು ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ ಬ್ರಿಟನ್ ವೈರಸ್ ಹರಡೋದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ. ಇನ್ನು ರಾಜ್ಯದಲ್ಲಿ ನೈಟ್ ಕರ್ಪ್ಯೂ ಹೇರುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್ ವೈರಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಲರ್ಟ್ ಆಗಿರುವಂತೆ ಸೂಚನೆ ನೀಡಿದ್ದು, ವಿದೇಶದಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಆರೋಗ್ಯ ಇಲಾಖೆಗೆ ಬ್ರಿಟನ್ ವೈರಸ್ ಹರಡೋದನ್ನು ತಡೆಯೋದಕ್ಕೆ ಸೂಚಿಸಲಾಗಿದೆ. ಬ್ರಿಟನ್ ನಿಂದ ಬಂದವರನ್ನು ತಪಾಸಣೆಗೂ ಒಳಪಡಿಸಲಾಗುತ್ತಿದೆ. ರಾಜ್ಯಕ್ಕೆ ಬಂದಿರುವ ಈವರೆಗಿನ ಯುಕೆ ಪ್ರಯಾಣಿಕರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಆತಂಕ ಪಡುವಂತ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ನೈಟ್ ಕರ್ಪೂ ಜಾರಿ ಇಲ್ಲ ಎಂದು ತಿಳಿಸಿದರು.



