ಡಿವಿಜಿ ಸುದ್ದಿ, ಶಿವಮೊಗ್ಗ: ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಕಾಗೋಡು ತಿಮ್ಮಪ್ಪ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಪಾಸಣೆ ಮಾಡಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿದ್ದರು. ಈ ರ್ಯಾಪಿಡ್ ಟೆಸ್ಟ್ ನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ತಕ್ಷಣವೇ ಅವರನ್ನು ಸಾಗರದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಸದ್ಯಕ್ಕೆ ಕಾಗೋಡು ತಿಮ್ಮಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಿಮ್ಮಪ್ಪ ಅವರಿಗೆ ಕೊರೊನಾ ದೃಢವಾದ ಬಗ್ಗೆ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡುವ ಮೂಲಕ ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದ್ದಾರೆ. ನಮ್ಮ ಪ್ರೀತಿಯ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳಬೇಕು ಎಂದು ಖಾದರ್ ಹಾರೈಸಿದ್ದಾರೆ.



