Connect with us

Dvgsuddi Kannada | online news portal | Kannada news online

ಮದ್ಯ ಮಾರಾಟಕ್ಕೆ ಬಾಲಕನ ಬಳಕೆ: ಮಾಲೀಕರ ವಿರುದ್ಧ ಕ್ರಮಕ್ಕೆ ಆದೇಶ

ಜಿಲ್ಲಾ ಸುದ್ದಿ

ಮದ್ಯ ಮಾರಾಟಕ್ಕೆ ಬಾಲಕನ ಬಳಕೆ: ಮಾಲೀಕರ ವಿರುದ್ಧ ಕ್ರಮಕ್ಕೆ ಆದೇಶ

ಚಿತ್ರದುರ್ಗ: ಬಾಲಕನಿಂದ ಮದ್ಯ ಮಾರಾಟ ಮಾಡಿಸಿದ್ದು, ಸಾಬೀತಾಗಿರುವ ಹಿನ್ನೆಲೆ ನಗರದ ಮೆದೇಹಳ್ಳಿ ರಸ್ತೆಯಲ್ಲಿನ ಬಾರ್ ಮಾಲೀಕ ಹಾಗೂ ಆತನ ಪುತ್ರನ ವಿರುದ್ಧ ಕ್ರಮ ಕೈಗೊಳ್ಳಲು ನ್ಯಾಯಾಲಯ ಆದೇಶಿಸಿದೆ. ಹೌದು.. ಮಾರುತಿ ಬಾರ್ ಮಾಲೀಕ ನಿಂಗಪ್ಪ ಮತ್ತು ಅವರ ಮಗ ಸಂತೋಷ್ ವಿರುದ್ಧ ಕ್ರಮಕೈಗೊಳ್ಳಲು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜೆಎಂಎಫ್‍ಸಿ ಮತ್ತು ಪ್ರಧಾನ ದಂಡಾಧಿಕಾರಿಗಳು, ಬಾಲ ನ್ಯಾಯ ಮಂಡಳಿ ಆದೇಶಿಸಿದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ಈ ವೇಳೆ ಮಾಲೀಕ ನಿಂಗಪ್ಪ ಕಾನೂನು ಬಾಹಿರವಾಗಿ ಬಾಲಕನನ್ನು ಬಾರ್‍ನಲ್ಲಿ ಕೆಲಸಕ್ಕೆ ಇಟ್ಟುಕೊಂಡು ಬಾರ್ ಹಿಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿಸಿರುವುದು ಸಾಬೀತಾಗಿರುತ್ತದೆ. ಆದ್ದರಿಂದ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧೀಕ್ಷಕರಿಗೆ ನಿರ್ದೇಶಿಸಲಾಗಿರುತ್ತದೆ ಎಂದು ಸರ್ಕಾರಿ  ವೀಕ್ಷಣಾಲಯದ ಅಧೀಕ್ಷಕರಾದ ಕರಿಬಸವಯ್ಯ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top