ದಾವಣಗೆರೆ: ಚಿಪ್ಪು ಹಂದಿ ಮಾರಾಟ ಮಾಡುತ್ತಿದ್ದ ಅಂತರ್ ಜಿಲ್ಲಾ 18 ಆರೋಪಿಗಳ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಳಿವಿನಂಚಿನಲ್ಲಿರುವ ಪ್ಯಾಂಗೊಲಿನ್ (ಚಿಪ್ಪು ಹಂದಿ) ವನ್ಯಜೀವಿಯ ಚಿಪ್ಪುಗಳ ಮಾರಾಟ ಮಾಡುತ್ತಿದ್ದ 18 ಅಂತರ್ ಜಿಲ್ಲಾ ಆರೋಪಿತರ ಬಂಧನ, ಸುಮಾರು 67 ಕೆಜಿ 700ಗ್ರಾಂ ಪ್ಯಾಂಗೊಲಿನ್ ಚಿಪ್ಪುಗಳು ವಶಕ್ಕೆ ಪಡೆಯಲಾಗಿದೆ.

ಹರಿಹರ- ಶಿವಮೊಗ್ಗ ರಸ್ತೆಯ ಬದಿಯಲ್ಲಿ ವನ್ಯ ಜೀವಿಗೆ ಸಂಬಂಧಿಸಿದ ಪ್ಯಾಂಗೊಲಿನ್ (ಚಿಪ್ಪು ಹಂದಿ) ವನ್ಯಜೀವಿಯ ಚಿಪ್ಪುಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಪೊಲೀಸರು ನಡೆಸಿದ್ದಾರೆ.

ಡಿವೈಎಸ್ಪಿ ಬಿ.ಎಸ್.ಬಸವರಾಜ, ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಬಿ.ವಿ ಗಿರೀಶ್ ಹಾಗೂ ಸಿಬ್ಬಂದಿಯವರಾದ ಪ್ರಕಾಶ್, ಮುತ್ತುರಾಜ, ಲೋಹಿತ್, ಮಲ್ಲಿಕಾರ್ಜುನ ಹಾದಿಮನಿ, ದ್ಯಾಮೇಶ್, ಕೊಟ್ರೇಶ್ ರವರನ್ನೊಳಗೊಂಡ ಪೊಲೀಸ್ ತಂಡ ಹರಿಹರ- ಶಿವಮೊಗ್ಗ ರಸ್ತೆಯ ಹರಿಹರದ ಬಳಿ ಇರುವ ಶಿವಬಸವ ಡಾಬ ಬಳಿ ದಾಳಿ ಮಾಡಿ ಪ್ಯಾಂಗೊಲಿನ್ (ಚಿಪ್ಪು ಹಂದಿ) ವನ್ಯಜೀವಿಯ ಚಿಪ್ಪುಗಳನ್ನು ಸಾಗಿಸುತ್ತಿದ್ದ 18 ಜನ ಆರೋಪಿತರನ್ನು ವಶಕ್ಕೆ ಪಡೆದುಕೊಂಡು ಆರೋಪಿತರಿಂದ ಸುಮಾರು 67ಕೆಜಿ 700 ಗ್ರಾಂ ಪ್ಯಾಂಗೊಲಿನ್ (ಚಿಪ್ಪು ಹಂದಿ) ವನ್ಯಜೀವಿಯ ಚಿಪ್ಪುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ 2 ಓಮಿನಿ, 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಆರೋಪಿತರ ವಿರುದ್ಧ ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *